ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೆ ಸುಮಲತಾ ನಿರಾಸೆಗೊಂಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಅವರ ಸಂಧಾನವೂ ಫಲಪ್ರದವಾಗಿದೆ. ಹೀಗಾಗಿ ಇಂದು ಮಂಡ್ಯದಲ್ಲಿಯೇ ನಾನು ಸ್ಪರ್ಧೆಗೆ ನಿಲ್ಲಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ವೇಳೆ ದರ್ಶನ್ ಕೂಡ ಸಾಥ್ ನೀಡಿದ್ದಾರೆ.
ಸುಮಲತಾ ಮಾತನಾಡುವುದಕ್ಕೂ ಮುನ್ನ ಮಾತನಾಡಿದ ದರ್ಶನ್, ನನ್ನ ಸೆಲೆಬ್ರೆಟಿಗಳಿಗೆ ನಮಸ್ಕಾರ. ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರಕ್ಕೆ ಬಂದಾಗ ನನಗೆ ಎಳನೀರು ಕೊಟ್ಟು ತಣ್ಣಗೆ ಮಾಡಿದ್ದೀರಿ. ಅವರಿಗೆ ನನ್ನ ಧನ್ಯವಾದಗಳು. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದಗಳು. ಯಮ ಕರೆದರು ಅಮ್ಮನ ಒಂದು ಕೆಲಸ ಮುಗಿಸಿ ಬರುತ್ತೀನಿ ಎಂದು ಹೇಳುತ್ತೀನಿ. ಅವರ ಕುಟುಂಬದ ಜೊತೆಗಿನ ನನ್ನ ಬಾಂಧವ್ಯ ಅಂಥದ್ದು. ಇವತ್ತು ಕೈಗೆ ಆಪರೇಷನ್ ಇತ್ತು. ಆದರೆ ಅಮ್ಮನ ಕೆಲಸ ಇದೆ ಅಂತ ಬಂದೆ ಎಂದಿದ್ದಾರೆ.
ಅಮ್ಮ ಏನೇ ನಿರ್ಧಾರ ತೆಗೆದುಕೊಂಡರು ನಾನು ಅದಕ್ಕೆ ಬದ್ಧನಾಗಿರುತ್ತೇನೆ. ನಾನು ನನ್ನ ತಮ್ಮ ಅವರ ಮಾತನ್ನೇ ಕೇಳುತ್ತೇವೆ ಎಂದು ಸುಮಲತಾ ಅವರ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ನಟ ದರ್ಶನ್.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










