Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಚುನಾವಣೆ | ಕಾಂಗ್ರೆಸ್ ಬಗ್ಗೆ ಶೇಕಡ 70 ರಷ್ಟು ಒಲವಿದೆ, ಬಿಜೆಪಿಯವರು ಭ್ರಮೆಯಲ್ಲಿದ್ದಾರೆ : ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 04 :  ಲೋಕಸಭಾ ಚುನಾವಣೆಯಲ್ಲಿ ಶೇಕಡ 70 ರಷ್ಟು ಕಾಂಗ್ರೆಸ್ ಬಗ್ಗೆ ಒಲವಿದೆ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂಬ ಉತ್ಸಾಹದಲ್ಲಿದ್ದಾರೆ ಎಂದು ಅಭ್ಯರ್ಥಿ ಚಂದ್ರಪ್ಪ ಹೇಳಿದರು.

ಅವರು ಮಾಧ್ಯಮಗಳೊಂದಿಗೆ ಮಾತಾಡಿದರು.ನಾವು ಮತ್ತು ಪಕ್ಷ ಹಾಗೂ ಜಾತ್ಯಾತೀತ ತತ್ವ ಭದ್ರವಾಗಿದೆ. ಕಾರಜೋಳ ಬಂದಿರುವುದರಿಂದ ನಮಗೇನು ಸಮಸ್ಯೆ ಇಲ್ಲ. ಐದು ಗ್ಯಾರಂಟಿ ಯೋಜನೆಗಳು ಭದ್ರವಾಗಿವೆ. ಅನ್ಯ ಪಕ್ಷದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರ ಬಗ್ಗೆ ಮಾತಾಡುವ ಸಮಯವನ್ನು ಪಕ್ಷದ ಸಂಘಟನೆಗೋಸ್ಕರ ಬಳಸಿಕೊಳ್ಳುತ್ತೇವೆ ಎಂದರು.

ನಮ್ಮಲ್ಲಿ ಏಳು ಜನ ಶಾಸಕರಿದ್ದಾರೆ. ಆಂಜನೇಯ ಅವರು ಕಡಿಮೆ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಯಾರೇ ಬಂದರೂ ನಮ್ಮ ಎದುರಾಳಿಗಳೇ ಅವರಿಗೆ ನಾವು ಗೌರವಿಸುತ್ತೇವೆ. ನಾವು ಗೆಲ್ಲುತ್ತೇವೆ ಮತಗಳ ಅಂತರವನ್ನು ಜನರಿಗೆ ಬಿಡುತ್ತೇವೆ. ಕಾರಜೋಳ ಬಂದ ಮೇಲೆ ನಮ್ಮ ಪಕ್ಷ ಮತ್ತಷ್ಟು ಸದೃಢವಾಗಿದೆ. ಬಿಜೆಪಿಯವರು ಭ್ರಮೆಯಲ್ಲಿದ್ದಾರೆ ಎಂದು ಚಂದ್ರಪ್ಪ ತಿಳಿಸಿದರು.

ನಾನೇನು ಹೇಳುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ದೀಪಹಚ್ಚಲು ಯಾರೂ ಇರುವುದಿಲ್ಲ ಎಂದು ಹೇಳುವುದನ್ನುನಾನು ಒಪ್ಪುವುದಿಲ್ಲ. ಕಾಂಗ್ರೆಸ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭದ್ರವಾಗಿದೆ ಅದ್ಹೇಗೆ ದೀಪಹಚ್ಚಲು ಸಾಧ್ಯವಿಲ್ಲ. ಏನೂ ಕೆಲಸ ಮಾಡದೆ ಬುರುಡೆ ಬಿಡುವವರ ಬಗ್ಗೆ ನಾನೇನು ಹೇಳುವುದಿಲ್ಲ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!