Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪವಿತ್ರ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಏ. 05 : ಪವಿತ್ರ ಅವರನ್ನು ಚಿತ್ರದುರ್ಗ ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾನಂದಿನಿಗೌಡ ತಿಳಿಸಿದ್ದಾರೆ.

ಇವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ.ಪುಷ್ಪ ಅಮರನಾಥ್ ರವರ ಅನುಮೋದನೆ ಮತ್ತು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ.ತಾಜ್‍ಪೀರ್ ರವರ ಸೂಚನೆಯ ಮೇರೆಗೆ ಹಾಗೂ ಶಾಸಕರಾದ ಕೆ.ಸಿ.ವಿರೇಂದ್ರಪಪ್ಪಿರವರ ಶಿಫಾರಸ್ಸಿನ ಮೇರೆಗೆ ಇವರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾ ಸಮಿತಿಯ ಮಾರ್ಗದರ್ಶನದಲ್ಲಿ ಹಿರಿಯರ ಮತ್ತು ಸ್ಥಳಿಯ ನಾಯಕರು ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

ಶ್ರೀಮತಿ ಪವಿತ್ರರವರು ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿಯಾಗಿ ಕೆಲಸವನ್ನು ಮಾಡಿದ ಅನುಭವ ಇದೆ, ಇದ್ದಲ್ಲದೆ ಈಡಿಗ ಸಮಾಜದ ಪದಾಧಿಕಾರಿಗಳಾಗಿದ್ದು, ಕಾರ್ಮಿಕ ಮತ್ತು ಅಹಿಂದ ಸಂಘಟನೆಯ ಹಾಲಿ ಜಿಲ್ಲಾಧ್ಯಕ್ಷರಾಗಿ, ವಾಸುದೇವ ಮೇಟಿ ಬಣದ ರೈತ ಸಂಘದ ಚಿತ್ರದುರ್ಗ ತಾಲ್ಲೂಕು ಸಂಘದ ಅಧ್ಯಕ್ಷರಾಗಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment