ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಈಗಾಗಲೇ ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ಜನ ನೂರೆಂಟು ಕಾಯಿಲೆಯಿಂದ ಬಳಲುತ್ತಿದ್ದಾರೆ. ಜ್ವರ, ಸುಸ್ತು, ಕೆಮ್ಮು ಅಂತ ಹಲವರಿಗೆ ಅನಾರೋಗ್ಯ ಕಾಡುತ್ತಿದೆ. ಅದರ ಜೊತೆಗೆ ಕಾಲರ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಬೆಂಗಳೂರಿನಂತ ನಗರದಲ್ಲಿ ಕಾಲರ ರೋಗ ಹೆಚ್ಚಾಗುತ್ತಿದೆ. ಇದರಿಂದ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ ರಂದೀಪ್ ಮಾಹಿತಿ ನೀಡಿದ್ದಾರೆ. ಬಿಅಇಲಿನ ತಾಪ, ಬಿಸಿ ಗಾಳಿ, ಕಾಲರ ಬಗ್ಗೆ ಕಟ್ಟೆಚ್ಚರ ವಹಿಸಲು ಆದೇಶ ಹೊರಡಿಸಿದೆ. ಜೊತೆಗೆ ಸಾಂಕ್ರಾಮಿಕ ರೋಗಿಗಳ ಮಾಹಿತಿ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಬಿಸಿಲಿನ ತಾಪ ದಿನೇ ದಿನೇ ಏರಿಕೆಯಾಗುತ್ತಲೆ ಇದೆ.
ಇನ್ನು ಬರೀ ವಾಂತಿ ಬೇಧಿಯನ್ನು ಕಾಲರ ಅಂತ ತಿಳಿಯಬಾರದು. ಶುದ್ಧ ನೀರಿನ ಕೊರತೆಯಿಂದಾಗಿ ಕಾಲರ ಬರುತ್ತದೆ. ಕಳಪೆ ಗುಣಮಟ್ಟದ ನೀರು ಹಾಗೂ ಆಹಾರದಿಂದ ಕಾಲರ ಬರುತ್ತದೆ. ಇದು ನೇರವಾಗಿ ಹರಡುವುದಿಲ್ಲ. ಸಂಪರ್ಕವಿರಬೇಕು, ಇಲ್ಲವೇ ನೀವೇ ಸೇವಿಸಿದ್ದರೆ ಮಾತ್ರ. ಕಾಲರದ ಬಗ್ಗೆ ಸುಳ್ಳು ಮಾಹಿತಿಗಳು ಹರಿದಾಡುತ್ತಿವೆ. 50% ಏರಿಕೆಯಾಗಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು.
ಬೆಂಗಳೂರಿನಲ್ಲಿ ಮೂರು ತಿಂಗಳುಗಳಲ್ಲಿ 2 ಪ್ರಕರಣ, ರಾಮನಗರ ಜಿಲ್ಲೆಗಳಲ್ಲಿ 1, ಒಟ್ಟು 6 ಪ್ರಕರಣಗಳು ವರದಿಯಾಗಿದೆ. ಕಾಲರಾ ಔಟ್ ಬ್ರೇಕ್ ಆಗಿಲ್ಲ. ಎಲ್ಲೂ ಕೂಡ ಒಂದೇ ಲೊಕ್ಯಲಿಟಿಯಲ್ಲಿ ಹೆಚ್ಚು ಕೇಸ್ ಪ್ರಕರಣಗಳು ಬಂದಿಲ್ಲ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಮಾತ್ರ ಕಾಲರಾ ಪ್ರಕರಣ ವರದಿಯಾಗಿದೆ ಎಂದು ಹೇಳಿದ್ದು, ಬಳಿಕ ಕಾಲರ ಬರದಂತೆ ಎಚ್ಚರಿಕೆ ವಹಿಸಲು ತಿಳಿಸಿದ್ದಾರೆ.
ಕೈ ಶುದ್ದವಾಗಿರಬೇಕು
ಕೈ ಸ್ವಚ್ಚಗೊಳಿಸಿ ಆಹಾರ ಸೇವಿಸಬೇಕು
ಶುದ್ದ ಕುಡಿಯುವ ನೀರು ಬಳಸಬೇಕು
ಸೇವೆಜ್ ಅಥವಾ ಕುಡಿಯುವ ನೀರಿನ ಪೈಪ್ ಒಟ್ಟಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್