Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ ‘ಕೇರಳ ಸ್ಟೋರಿ’ ನಟಿ

Facebook
Twitter
Telegram
WhatsApp

2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದರು. ಅಂದಿನಿಂದ ಇಂದಿನವರೆಗೂ ಆ ಅಪಾರ್ಟ್ಮೆಂಟ್ ಖಾಲಿಯಾಗಿಯೇ ಉಳಿದಿತ್ತು. ಯಾರು ಕೂಡ ಖರೀದಿಸುವ ಸಾಹಸ ಮಾಡಿರಲಿಲ್ಲ. ಇದೀಗ ಅದಾ ಶರ್ಮಾ ಈ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಸುಶಾಂತ್ ವಾಸವಾಗಿದ್ದು 4 ಬಿಎಚ್​ಕೆ ಮನೆ. ಸಮುದ್ರಕ್ಕೆ ಮುಖ ಮಾಡಿ ಈ ಮನೆ ಇದ್ದು, 2500 ಸ್ಕ್ವೇರ್ ಫೀಟ್ ಇದೆ. 6ನೇ ಅಂತಸ್ತಿನಲ್ಲಿ ಈ ಮನೆ ಇದೆ. 2022ರಲ್ಲಿ ಈ ಮನೆ ಮಾರಾಟದ ಬಗ್ಗೆ ಸುದ್ದಿ ಬಿತ್ತರ ಆಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ಮೂಲಕ ಅದಾ ಶರ್ಮಾ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಇದೀಗ ಸುಶಾಂತ್ ಅಪಾರ್ಟ್ಮೆಂಟ್ ಖರೀದಿ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಮುಂಬೈನ ಮೋಂಟ್ ಬ್ಲಾಂಕ್ ಅಪಾರ್ಟ್ಮೆಂಟ್ ನಲ್ಲಿ ಸುಶಾಂತ್ ಉಳಿದುಕೊಂಡಿದ್ದರು. ಇದೇ ಫ್ಲ್ಯಾಟ್ ಅನ್ನು ಈಗ ಅದಾ ಶರ್ಮಾ ಖರೀದಿ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅದಾ ಶರ್ಮಾ, ನಾನು ಆ ಮನೆ ನೋಡಲು ಹೋದಾಗ ಮಾಧ್ಯಮದವರ ಸಂಪೂರ್ಣ ಗಮನ ನನ್ನ ಮೇಲಿತ್ತು. ಖಾಸಗಿ ವಿಚಾರಗಳನ್ನು ನಾನು ನನ್ನಲ್ಲೇ ಇಟ್ಟುಕೊಳ್ಳಲು ಬಯಸುತ್ತೇನೆ. ನನ್ನ ಸಿನಿಮಾಗಳ ವುಚಾರವಾಗಿ ಮಾತ್ರ ಸುದ್ದಿಯಲ್ಲಿ ಇರುವುದಕ್ಕೆ ಬಯಸುತ್ತೇನೆ. ಉಳಿದ ವಿಚಾರಗಳಲ್ಲಿ ಗೌಪ್ಯತೆ ಕಾಪಾಡಿಕೊಳ್ಳುತ್ತೇನೆ. ಈ ಜಗತ್ತಿನಲ್ಲಿ ಇಲ್ಲದ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಪಡುವುದಿಲ್ಲ, ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಹೀಗಾಗಿಯೇ ನಾನು ಅವರ ಮನೆಯನ್ನು ಖರೀದಿಸಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!