Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಫೋಟೋಗಾಗಿ ಕೋರ್ಟ್ ಮೊರೆ ಹೋದ ಕೆ ಎಸ್ ಈಶ್ವರಪ್ಪ

Facebook
Twitter
Telegram
WhatsApp

ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದೆ ಇರುವ ಕಾತಣಕ್ಕೆ ಈಶ್ವರಪ್ಪ ಬಂಡಾಯವೆದ್ದಿದ್ದಾರೆ. ಚುನಾವಣೆಗೆ ಸ್ವಾತಂತ್ರ್ಯವಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಈಗಾಗಲೇ ಈಶ್ವರಪ್ಪ ಚುನಾವಣಾ ಪ್ರಚಾರದ ಕಾರ್ಯವನ್ನು ಶುರು ಮಾಡಿಕೊಂಡಿದ್ದಾರೆ. ಆದರೆ ಈ ಚುನಾವಣೆಯ ಸಮಯದಲ್ಲಿ ಮೋದಿ ಅವರ ಫೋಟೋ ಬಳಕೆ‌ ಮಾಡಿಕೊಳ್ಳಲಾಗಿತ್ತು. ಇದಕ್ಕೆ ವಿರೋಧ ಕೇಳಿ ಬಂದ ಬೆನ್ನಲ್ಲೇ ಈಶ್ವರಪ್ಪ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

 

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಅವರ ಫೋಟೋ ಬಳಕೆ ಮಾಡಿಕೊಂಡಿದ್ದಕ್ಕೆ ಬಿವೈ ರಾಘವೇಂದ್ರ ಅವರು ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ ಅವರು, ಮೋದಿ ಏನು ಅವರಪ್ಪನ ಮನೆಯ ಆಸ್ತಿನಾ ಎಂದು ಕಿಡಿಕಾರಿದ್ದಾರೆ. ಇದೇ ವಿಚಾರಕ್ಕೆ ಶಿವಮೊಗ್ಗ ಕೋರ್ಟ್ ನಲ್ಲಿ ಕೆವಿಯಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಸಿಗುತ್ತೆ ಎಂಬ ನಂಬಿಕೆಯಿಂದಾನೇ ಈಶ್ವರಪ್ಪ ಕಾಯುತ್ತಿದ್ದರು. ಆದರೆ ಹಾವೇರಿ ಟಿಕೆಟ್ ಬಸವರಾಜ್ ಬೊಮ್ಮಾಯಿ ಅವರಿಗೆ ಹೋಗಿತ್ತು. ಇದಾದ ಬಳಿಕ ಬಂಡಾಯವೆದ್ದಿದ್ದರು. ಬಂಡಾಯ ಶಮನ ಮಾಡುವುದಕ್ಕೆ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ ಅವರು ಈಶ್ವರಪ್ಪ ಅವರಿಗೆ ಕರೆ ಮಾಡಿದ್ದರು. ದೆಹಲಿಗೆ ಆಹ್ವಾನ ಕೊಟ್ಟು ಹೋಗಿದ್ದರು. ಅದರಂತೆ ಈಶ್ವರಪ್ಪ ಅವರು ದೆಹಲಿಗೂ ಹೋಗಿದ್ದರು. ಅಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವುದಕ್ಕೆ ಸಾಧ್ಯವಾಗಲಿಲ್ಲ. ದೆಹಲಿಯಿಂದಾನೇ ಮತ್ತೆ ಬಂಡಾಯದ ಸ್ಪರ್ಧೆ ಘೋಷಣೆ‌ ಮಾಡಿದ್ದರು. ಈಗಾಗಲೇ ಪ್ರಚಾರ ಕಾರ್ಯವನ್ನು ಶುರು ಮಾಡಿದ್ದು, ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!