Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರಿಂದ ಮತಯಾಚನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 06 : ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರು ನಗರದಲ್ಲಿ ವಿವಿಧ ಸಮುದಾಯದ ಪ್ರಬುದ್ದರ ಮತ್ತು ಕೀ ಓಟರ್ಸ್ ಸಭೆ ನಡೆಸಿ ಮತಯಾಚಿಸಿದರು.

ಒಂದೊಂದು ಬೂತ್‍ನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಮುನ್ನೂರಕ್ಕೂ ಹೆಚ್ಚು ಮತಗಳು ಪಕ್ಷಕ್ಕೆ ಸಿಗುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಮೂರನೆ ಬಾರಿಗೆ ನರೇಂದ್ರಮೋದಿರವರು ಗೆದ್ದು ದೇಶದ ಪ್ರಧಾನಿಯಾದಾಗ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮೋದಿರವರ ಜನಪರ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ವಿನಂತಿಸಿದರು.


ಬೂತ್ ಮಟ್ಟದ ಬೈಠಕ್‍ಗಳಿಗೆ ಹೆಚ್ಚಿನ ಮಹತ್ವವಿರುವುದರಿಂದ ಸರಿಯಾಗಿ ನಡೆಯುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಹಿರಿಯ ನಾಗರೀಕರ ಮನಸ್ಸನ್ನು ಗೆಲ್ಲುವುದು ತುಂಬಾ ಮುಖ್ಯ. ಕುಟುಂಬದ ಎಲ್ಲಾ ಮತದಾರರು ಮತದಾನ ಮಾಡುವಂತೆ ಜಾಗೃತಿ ವಹಿಸಿ ಬೂತ್ ಗೆದ್ದರೆ ಚುನಾವಣೆ ಗೆದ್ದಂತೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಏನು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೆನೋ ಅದನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಮಧ್ಯಕರ್ನಾಟಕದ ಬಯಲುಸೀಮೆಯನ್ನು ಅಭಿವೃದ್ದಿಗೊಳಿಸುವುದಾಗಿ ವಾಗ್ದಾನ ಮಾಡಿದರು.


ಇದೇ ತಿಂಗಳ 26 ರಂದು ನಡೆಯುವ ಚುನಾವಣೆಯಲ್ಲಿ ಯಾರು ಎಲ್ಲಿಯೇ ಇರಲಿ ಮತದಾನ ಮಾಡುವುದನ್ನು ಮಾತ್ರ ಮರೆಯಬಾರದು. ಅದರಂತೆ ನಿಮ್ಮ ಮನೆಯ ಅಕ್ಕಪಕ್ಕದಲ್ಲಿರುವವರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವೊಲಿಸಬೇಕೆಂದು ಮನವಿ ಮಾಡಿದರು.

ಪಟೇಲ್, ಗುಜ್ಜರ್, ಜೈನ್, ವಿಷ್ಣು, ವಿಶ್ವಕರ್ಮ, ಮರಾಠ, ಗಂಗಾ ಮತಸ್ಥ, ಆರ್ಯವೈಶ್ಯ ಸಮಾಜದ ಪ್ರಮುಖರನ್ನು ಭೇಟಿ ಮಾಡಿ ಮತಯಾಚಿಸಿದ ಗೋವಿಂದ ಕಾರಜೋಳರವರು ನಮ್ಮ ಪಕ್ಷ ಸಣ್ಣಸಣ್ಣ ಜಾತಿಗಳನ್ನು ಗುರುತಿಸಿ ಒಂದಲ್ಲ ಒಂದು ರೀತಿಯಲ್ಲಿ ಅಧಿಕಾರ ನೀಡುತ್ತಿದೆ. ಇದೆ ತಿಂಗಳ 26 ರಂದು ನಡೆಯುವ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವುದರ ಮೂಲಕ ದೇಶದಲ್ಲಿ ಮತ್ತೊಮ್ಮೆ ನರೇಂದ್ರಮೋದಿರವರನ್ನು ಪ್ರಧಾನಿಯನ್ನಾಗಿ ಮಾಡುವಂತೆ ವಿನಂತಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!