ಚಿತ್ರದುರ್ಗ. ಏ.08: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಅಂತಿಮವಾಗಿ 20 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ, ಇಂಡಿಯನ್ ಮೂವ್ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ, ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ, ಪಕ್ಷೇತರ ಅಭ್ಯರ್ಥಿಗಳಾದ ಅಮೃತ ರಾಜ, ಗಣೇಶ್, ತುಳಸಿ ಹೆಚ್, ಎಂ.ಪಿ.ದಾರಕೇಶ್ವರಯ್ಯ, ಕೆ.ನರಸಿಂಹಮೂರ್ತಿ, ನಾಗರಾಜಪ್ಪ, ಭೂತರಾಜ ವಿ.ಎಸ್, ಮಂಜುನಾಥ ಸ್ವಾಮಿ ಟಿ, ರಘುಕುಮಾರ್ ಎಸ್, ಬಿ.ವೆಂಕಟೇಶ್, ಶ್ರೀನಿವಾಸ ಎಸ್.ಹೆಚ್, ಸುಧಾಕರ. ಆರ್ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಮೂರ್ತಿ, ಆರ್.ದಾಸಪ್ಪ, ದೇವರಾಜ ಟಿ ಹಾಗೂ ಕೆ.ಶಿವಲಿಂಗಪ್ಪ ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದು, ಚುನಾವಣೆಯಿಂದ ಹಿಂದೆ ಸರಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








