Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ :ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

---Advertisement---

 

ಚಿತ್ರದುರ್ಗ.  ಏ.08:   ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಅಂತಿಮವಾಗಿ 20 ಅಭ್ಯರ್ಥಿಗಳು ಚುನಾವಣಾ  ಕಣದಲ್ಲಿ ಉಳಿದಿದ್ದಾರೆ  ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು ಸಿ.ಎನ್, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ, ಕರುನಾಡ ಸೇವಕರ ಪಕ್ಷದ ಶಬರೀಶ್ ಆರ್, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ, ಪಕ್ಷೇತರ ಅಭ್ಯರ್ಥಿಗಳಾದ ಅಮೃತ ರಾಜ, ಗಣೇಶ್, ತುಳಸಿ ಹೆಚ್, ಎಂ.ಪಿ.ದಾರಕೇಶ್ವರಯ್ಯ, ಕೆ.ನರಸಿಂಹಮೂರ್ತಿ, ನಾಗರಾಜಪ್ಪ, ಭೂತರಾಜ ವಿ.ಎಸ್, ಮಂಜುನಾಥ ಸ್ವಾಮಿ ಟಿ, ರಘುಕುಮಾರ್ ಎಸ್, ಬಿ.ವೆಂಕಟೇಶ್, ಶ್ರೀನಿವಾಸ ಎಸ್.ಹೆಚ್, ಸುಧಾಕರ. ಆರ್ ಅವರು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಮೂರ್ತಿ, ಆರ್.ದಾಸಪ್ಪ, ದೇವರಾಜ ಟಿ ಹಾಗೂ ಕೆ.ಶಿವಲಿಂಗಪ್ಪ ತಮ್ಮ ನಾಮಪತ್ರಗಳನ್ನು ವಾಪಸ್ಸು ಪಡೆದು, ಚುನಾವಣೆಯಿಂದ ಹಿಂದೆ ಸರಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment