Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿ.ಯು. ಫಲಿತಾಂಶ ಪ್ರಕಟ : ಚಿತ್ರದುರ್ಗ ಜಿಲ್ಲೆಗೆ 31 ನೇ ಸ್ಥಾನ, ಶೇ.72.92 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

---Advertisement---

ಚಿತ್ರದುರ್ಗ. ಏ.10: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಂದ ಒಟ್ಟು 13,348 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 9734 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ 31 ಸ್ಥಾನವನ್ನು ಜಿಲ್ಲೆ ಪಡೆದುಕೊಂಡಿದೆ.

ಕಲಾ ವಿಭಾಗದಲ್ಲಿ ಜಿಲ್ಲೆಗೆ ಶೇ.57.79 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 3990 ವಿದ್ಯಾರ್ಥಿಗಳ ಪೈಕಿ 2306 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಶೇ.75.07 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 3437 ವಿದ್ಯಾರ್ಥಿಗಳ ಪೈಕಿ 2580 ವಿದ್ಯಾರ್ಥಿಗಳು ಉತ್ತೀರ್ಣರಾಗಿದಾರೆ. ವಿಜ್ಞಾನ ವಿಭಾಗದಲ್ಲಿ ಶೇ.81.88 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 5921 ವಿದ್ಯಾರ್ಥಿಗಳ ಪೈಕಿ 4848 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

 

ಇದರ ಹೊರತಾಗಿ ಪರೀಕ್ಷೆಗೆ ಹಾಜರಾದ 965 ಪುನಾರವರ್ತಿತ ವಿದ್ಯಾರ್ಥಿಗಳ ಪೈಕಿ 402 ಹಾಗೂ 385 ಖಾಸಗಿ ವಿದ್ಯಾರ್ಥಿಗಳ ಪೈಕಿ 123 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023ರ ನೇ ಸಾಲಿನಲ್ಲಿ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.69.5 ರಷ್ಟು ಫಲಿತಾಂಶ ಲಭ್ಯವಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment