Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಂಜಾನ್  ತ್ಯಾಗ, ಪ್ರೀತಿ, ಶಾಂತಿಯ ಸಂಕೇತ :  ಬಿ.ಎನ್.ಚಂದ್ರಪ್ಪ

---Advertisement---

ಚಿತ್ರದುರ್ಗ  : ಏ.11 :  ಚಿತ್ರದುರ್ಗದ ಜಾಮಿಯಾ ಈದ್ಗಾ, ಕೊಹಿನೂರ್ ಈದ್ಗಾ, ತಬ್ಲೀಗಿ ಜಮಾದ್ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೇರಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರ ಜೊತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಬಿ.ಎನ್.ಚಂದ್ರಪ್ಪ ಭಾಗವಹಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿದ  ಬಿ.ಎನ್.ಚಂದ್ರಪ್ಪ, ಎಲ್ಲ ಧರ್ಮಗಳ ಆಶಯವೂ ಶಾಂತಿ, ಸೌಹಾರ್ದದಿಂದ ಇರಬೇಕು ಎನ್ನುವುದನ್ನು ತಿಳಿಸುವುದೇ ಆಗಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಯಾವುದೇ ಧರ್ಮವೂ ಇನ್ನೊಂದು ಧರ್ಮಕ್ಕೆ ಕೇಡು ಬಯಸುವುದಿಲ್ಲ. ಎಲ್ಲ ಧರ್ಮಗಳು ಸಹೋದರತ್ವವನ್ನೇ ಸಾರಿವೆ ಮತ್ತು ಉತ್ತಮ ವಿಚಾರಗಳನ್ನು ಹೇಳಿವೆ. ಈ ಸೌಹಾರ್ದ ಪರಂಪರೆಯನ್ನು ಎಲ್ಲರೂ ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರಲ್ಲದೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಹಬಾಳ್ವೆಯಿಂದ ಬದುಕಬೇಕು ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕರಾದ ವೀರೇಂದ್ರ ಪಪ್ಪಿ,ಡಿಸಿಸಿ ಅಧ್ಯಕ್ಷರಾದ ತಾಜ್ ಪೀರ್  ವಕ್ಫ್ ಬೋರ್ಡ್ ಅಧ್ಯಕ್ಷರಾದ  ಅನ್ವರ್, ಎ ಸಿ ಓ ಬಾಬು,ತಾಜ್ ಪೀರ್,ಮುಹೀಬ್ ಉಲ್ಲಾ, ಅಲ್ಲಾ ಬಕ್ಷಿ, ಖಾಸಿಂ ಅಲಿ, ಅನೀಸ್,ಖುದ್ದೂಸ್ ಹಾಗು ಅನೇಕ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment