Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿಯಲ್ಲಿ ಮೊದಲ ಮಳೆ : ಜನರಿಗೆ ಖುಷಿಯೋ ಖುಷಿ

Facebook
Twitter
Telegram
WhatsApp

ಈ ಬಾರಿ ಪ್ರತಿ ಸಲಕ್ಕಿಂತ ಹೆಚ್ಚಿನ ಬಿಸಿಲು ಇದೆ. ಉಷ್ಣಾಂಶ ಹೆಚ್ಚಾಗಿರುವ ಕಾರಣ ಜನರಂತು ನೊಂದು ಬೆಂದು ಹೋಗಿದ್ದಾರೆ. ಅರ್ಧ ಗಂಟೆ ಹೊರಗೆ ಹೋದರೆ ಸಾಕು, ಸುಸ್ತಾಗಿ ಮನೆಗೆ ಬರುತ್ತಾರೆ. ಭೂಮಿಯ ಉಷ್ಣಾಂಶ ಕಡಿಮೆಯಾಗಬೇಕಾದರೆ ಮಳೆ ಬರಲೇಬೇಕು.‌ ಯುಗಾದಿ ಹಬ್ಬದ ಹಿಂದೆ ಮುಂದೆ ಮಳೆಯಾಗುವುದು ವಾಡಿಕೆ. ಅದರಂತೆ ಶಿವಮೊಗ್ಗ, ಧಾರವಾಡ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ವರುಣ ಧರೆಗಿಳಿದಿದ್ದಾನೆ. ಟ್ಯಾಂಕರ್ ನೀರು ತಂದು ತೋಟ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದ ರೈತಾಪಿ ವರ್ಗಕ್ಕೆ ನಿನ್ನೆ ಮಳೆರಾಯ ಸಂತಸ ನೀಡಿದ್ದಾನೆ. ಈ ಮೂಲಕ ಯುಗಾದಿ ಹಬ್ಬದ ಸಂಭ್ರಮ ದುಪ್ಪಟ್ಟಾಗಿದೆ.

ನಿನ್ನೆ ಈ ಭಾಗದಲ್ಲೆಲ್ಲಾ ಮಳೆಯಾಗಿದ್ದು, ಜನ ಬಿಸಿಲಿನ ತಾಪದಿಂದ ಕೊಂಚ ತಂಪಾಗಿದ್ದನ್ನು ಫೀಲ್ ಮಾಡಿದ್ದಾರೆ. ದೇವನಗರಿ ದಾವಣಗೆರೆಯಲ್ಲಿ ಮಳೆಯಾಗಿದ್ದು, ಹೆಬ್ಬಾಳು, ಹುಣಸೆಕಟ್ಟೆ, ಮಂಡಲೂರು ಸೇರಿದಂತೆ ಹಲವು ಗ್ರಾಮಗಳಿಗೆ ಸಾಧಾರಣ ಮಳೆಯಾಗಿದೆ. ರಾಜ್ಯದ ಇನ್ನು ಹಲವೆಡೆ ಇಂದು ಕೂಡ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಈಗಾಗಲೇ ಮುನ್ಸೂಚನೆಯನ್ನು ನೀಡಿದೆ.

ಇನ್ನು ಶಿವಮೊಗ್ಗ ಭಾಗದಲ್ಲೂ ನಿನ್ನೆ ರಾತ್ರಿ ಮಳೆಯಾಗಿದೆ. ಸುಮಾರು 20 ನಿಮಿಷಗಳ ಕಾಲ ಮಳೆಯಾಗಿದೆ. ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರ ಮನಸ್ಸನ್ನು ನಿನ್ನೆ ವರುಣರಾಯ ತಂಪಾಗಿಸಿದ್ದಾನೆ. ಹಲವು ಭಾಗಗಳಲ್ಲಿ ಮಳೆ ಬಿಸಿಲಿನ ತಾಪವನ್ನು ಕಡಿಮೆಗೊಳಿಸಿದರೆ ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲೆಲ್ಲಾ ಗುಡುಗು ಸಹಿತ ಮಳೆಯಾಗಿದ್ದು, ಅನಾಹುತಕ್ಕೂ ಕಾರಣವಾಗಿದೆ. ಸಿಡಿಲು ಬಡಿದು ವಿಜಯಪುರದಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಒಂದು ಎಮ್ಮೆ, ಎರಡು ಆಕಳು ಕೂಡ ಸಿಡಿಲಿಗೆ ಬಲಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!