Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಡಿಯುವ ನೀರಿನ ಸಮಸ್ಯೆ : ಪ್ರಚಾರಕ್ಕೆ ಬರುತ್ತಿದ್ದ ಸಚಿವ ಸುಧಾಕರ್ ಕಾರಿಗೆ ಮುತ್ತಿಗೆ

Facebook
Twitter
Telegram
WhatsApp

ಹಿರಿಯೂರು : ಎಷ್ಟೋ ಹಳ್ಳಿಗಳಲ್ಲಿ ಈಗಲೂ ಮೂಲಭೂತ ಸೌಕರ್ಯಕ್ಕೆ ಕೊರತೆ ಇದೆ. ಆದರೆ ಜನಪ್ರತಿನಿಧಿಗಳು ಮಾತ್ರ ಅತ್ತಕಡೆ ಗಮನ ಹರಿಸುವುದೇ ಇಲ್ಲ. ಚುನಾವಣೆಯ ಹೊಸ್ತಿಲಲ್ಲಿ ಮಾತ್ರ ಜನರ ಮುಂದೆ ಬಂದು ಭರವಸೆಗಳನ್ನ ನೀಡಿ ಹೋಗುತ್ತಾರೆ. ಇದೀಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ತೆರಳಿದ ಸಂದರ್ಭದಲ್ಲಿ ಸಚುವ ಸುಧಾಕರ್ ಅವರಿಗೆ ದಿಂಡವರ ಗ್ರಾಮದ ಜನ ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

 

ತಾಲೂಕಿನ ದಿಂಡವರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಆ ಸಮಸ್ಯೆಯನ್ನು ಬಗೆಹರಿಸದೆ ಈಗ ಚುನಾವಣೆಯ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಮತಯಾಚನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸಚಿವರು ಗ್ರಾಮದೊಳಗೆ ಬರುತ್ತಿದ್ದಂತೆಯೇ ಸಚಿವರ ಕಾರಿಗೆ ಗ್ರಾಮಸ್ಥರು ಕಾರಿಗೆ ಅಡ್ಡಲಾಗಿ ಮಲಗಿ ನೇರವಾಗಿ ವಾಪಾಸ್ ಕಳಿಸಿರುವ ಘಟನೆ ನಡೆದಿದೆ.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಚಿವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗಷ್ಟೇ ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ದಿಂಡವಾರ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ನೀರು ಪೂರೈಕೆ ಮಾಡದಿದ್ದರೆ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇಷ್ಟಾದರೂ ಬಳಿಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ. ಶುಕ್ರವಾರ ಸಚಿವ ಡಿ ಸುಧಾಕರ್ ಅವರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿಎನ್‌ ಚಂದ್ರಪ್ಪ ಅವರ ಪರವಾಗಿ ಮತಯಾಚನೆ ಮಾಡಲು ಗ್ರಾಮಕ್ಕೆ ತೆರಳುತ್ತಿದ್ದಂತೆಯೇ ಗ್ರಾಮದ ಮಹಿಳೆಯರು, ಪುರುಷರು, ಮಕ್ಕಳು ಸಚಿವರ ಕಾರಿಗೆ ಅಡ್ಡ ಮಲಗಿ, ಮುತ್ತಿಗೆ ಹಾಕಿದ್ದಾರಲ್ಲದೆ, ಸಚಿವರಿಗೆ ಘೇರಾವ್ ಹಾಕಿ ವಾಪಸ್ ಕಳುಹಿಸಿದ್ದಾರೆ. ಸಚಿವರು ಕಾರಿನಿಂದ ಇಳಿದು ಮಾತನಾಡಲು ಗ್ರಾಮಸ್ಥರು ಅವಕಾಶ ಕೊಟ್ಟಿಲ್ಲ. ಪ್ರತಿಭಟನೆ ಕಾವು ರಂಗೇರುತ್ತಿದ್ದಂತೆಯೇ ಸಚಿವರು ಕಾರು ಇಳಿಯದೇ ಬಂದ ದಾರಿಗೆ ಸುಂಕ ಇಲ್ಲಂತೆ ವಾಪಸ್ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!