Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸತತ ಸೋಲಿನ ನಡುವೆ ಆರ್ಸಿಬಿಗೆ ಮತ್ತೊಂದು ಶಾಕ್ : ಮುಂದಿ‌ನ ಪಂದ್ಯಕ್ಕೆ ಮ್ಯಾಕ್ಸಿ ಅಲಭ್ಯ

---Advertisement---

ಆರ್ಸಿಬಿ ಅಭಿಮಾನಿಗಳ ಕನಸು ಈ ಬಾರಿಯ ಐಪಿಎಲ್ ನಲ್ಲಿಯೂ ನುಚ್ಚು ನೂರಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿ ಕಾಣಿಸುತ್ತಿದೆ. ಈಗಾಗಲೇ ಆರ್ಸಿಬಿ ಐದು ಮ್ಯಾಚ್ ಸೋತಿದೆ. ಕೇವಲ ಒಂದೇ ಒಂದು ಮ್ಯಾಚ್ ಗೆದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆಯನ್ನು ಆರ್ಸಿಬಿ ಫ್ಯಾನ್ಸ್ ಇಟ್ಟುಕೊಂಡಿದ್ದರು. ಆದರೆ ಮುಂಬೈ ಕ್ರೀಡಾಂಗಣದಲ್ಲೂ ಹೀನಾಯವಾಗಿ ಸೋಲು ಕಂಡಿದೆ. ಇದರ ಬೆನ್ನಲ್ಲೇ ಇದೀಗ ಆರ್ಸಿಬಿ ಶಾಕ್ ಆಗಿದ್ದು, ಸ್ಟಾರ್ ಪ್ಲೇಯರ್ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

 

ಮುಂಬೈ ಇಂಡಿಯನ್ಸ್ ಜೊತೆಗಿನ ಪಂದ್ಯದಲ್ಲಿ ಮ್ಯಾಕ್ಸ್ ವೆಲ್ ಇಂಜೂರಿಗೆ ಒಳಗಾಗಿದ್ದಾರೆ. ಥಂಬ್ ಇಂಜೂರಿಯಾಗಿದ್ದು, ಕೈಗೆ ತೀವ್ರವಾದ ಗಾಯಗಳಾಗಿವೆ. ಹೀಗಾಗಿ ಮ್ಯಾಕ್ಸ್ ಗೆ ಚಿಕಿತ್ಸೆಯ ಅವಶ್ಯಕತೆ ಇದ್ದು ಮುಂದಿನ ಪಂದ್ಯದಲ್ಲಿ ಆಡುವುದಕ್ಕೆ ಕಷ್ಟ ಸಾಧ್ಯವಾಗಿದೆ. ಈ ಮೂಲಕ ಮ್ಯಾಕ್ಸ್ ವೆಲ್ ನೆಕ್ಸ್ಟ ಮ್ಯಾಚ್ ಗೆ ಅಲಭ್ಯರಾಗಿದ್ದಾರೆ.

ಏಪ್ರಿಲ್​ 15ನೇ ತಾರೀಕು ನಡೆಯಲಿರೋ ಸನ್​ರೈಸರ್ಸ್​​​​ ಹೈದರಾಬಾದ್​​​ ತಂಡದ ವಿರುದ್ಧ ಆರ್ಸಿಬಿ ಮ್ಯಾಚ್ ನಡೆಯಲಿದೆ. ಮ್ಯಾಕ್ಸ್‌ವೆಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್. ಇವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡುತ್ತಿಲ್ಲ. ಸತತ 5 ಸೋಲಿನಿಂದ ಕಂಗೆಟ್ಟ ಆರ್​​ಸಿಬಿ ಹೈದರಾಬಾದ್​​ ವಿರುದ್ಧ ಪಂದ್ಯಕ್ಕಾಗಿ ತಂಡದಲ್ಲಿ ಭಾರೀ ಬದಲಾವಣೆ ಮಾಡೋ ಸಾಧ್ಯತೆ ಇದೆ. ಕಳೆದ 6 ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿರೋ ಸ್ಟಾರ್​ ಆಲ್​ರೌಂಡರ್​ ಮ್ಯಾಕ್ಸಿ ಅವರು ಗಾಯಗೊಂಡ ಕಾರಣ ಕೈ ಬಿಡೋ ಸಾಧ್ಯತೆ ಇದೆ. ಅವರ ಸ್ಥಾನಕ್ಕೆ ಮ್ಯಾಕ್ಸಿ ಬದಲಿಗೆ ಇಂಗ್ಲೆಂಡ್ ಆಲ್​ರೌಂಡರ್ ಆಗಿರುವ ವಿಲ್​ ಜ್ಯಾಕ್ಸ್​ ಆಯ್ಕೆ ಮಾಡಬಹುದು ಎಂದು ವರದಿಯಾಗಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment