Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿವಿಯಲ್ಲಿ ಮೊಟ್ಟಮೊದಲ ಬಾರಿಗೆ ಜ್ಯೋತಿಷ್ಯ ಶುರು ಮಾಡಿದ್ದ ಎಸ್.ಕೆ. ಜೈನ್ ನಿಧನ

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕದ ಮೊಟ್ಟ ಮೊದಲ ಜ್ಯೋತಿಷಿ ಎಂದು ಖ್ಯಾತಿ ಪಡೆದಿದ್ದ ಎಸ್ ಕೆ ಜೈನ್ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜೈನ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಪತ್ನಿ ಮತ್ತು ಮಕ್ಕಳು ಅಗಲಿದ್ದಾರೆ.

ಇವರ ತಂದೆ ಬಿ ಜಿ ಶಶಿಕಾಂತ್ ಜೈನ್ ಹೆಸರಾಂತ ಜ್ಯೋತಿಷಿಗಳಾಗಿದ್ದವರು. ಜ್ಯೋತಿರ್ವಿದ್ಯೆಯಲ್ಲಿ ಇಡೀ ದೇಶದಲ್ಲಿ ಹೆಸರು ಮಾಡಿದ್ದ ದಿವಂಗತ ಬಿ ಜಿ ಶಶಿಕಾಂತ್ ಜೈನ್ ರ ಪುತ್ರ ಎಸ್ ಕೆ ಜೈನ್ ಮೊದಲಿಗೆ ಇಂಜಿನಿಯರ್ ಆಗಬೇಕೆಂದುಕೊಂಡವರು. ಆದರೆ ಅದನ್ನ ಕೈಬಿಟ್ಟು ತಂದೆಯ ಬಳಿಯಲ್ಲಿ ಜ್ಯೋತಿಷ್ಯವನ್ನೇ ರೂಢಿಸಿಕೊಂಡರು. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು.

ಬಳಿಕ ಖಾಸಗಿ ವಾಹಿನಿಯಲ್ಲೂ ಜ್ಯೋತಿಷ್ಯ ಶಾಸ್ತ್ರವನ್ನು ಹೇಳುತ್ತಿದ್ದರು. ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು. ಆದರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!