ಬೆಂಗಳೂರು: ಕರ್ನಾಟಕದ ಮೊಟ್ಟ ಮೊದಲ ಜ್ಯೋತಿಷಿ ಎಂದು ಖ್ಯಾತಿ ಪಡೆದಿದ್ದ ಎಸ್ ಕೆ ಜೈನ್ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಜೈನ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದರು. ಪತ್ನಿ ಮತ್ತು ಮಕ್ಕಳು ಅಗಲಿದ್ದಾರೆ.
ಇವರ ತಂದೆ ಬಿ ಜಿ ಶಶಿಕಾಂತ್ ಜೈನ್ ಹೆಸರಾಂತ ಜ್ಯೋತಿಷಿಗಳಾಗಿದ್ದವರು. ಜ್ಯೋತಿರ್ವಿದ್ಯೆಯಲ್ಲಿ ಇಡೀ ದೇಶದಲ್ಲಿ ಹೆಸರು ಮಾಡಿದ್ದ ದಿವಂಗತ ಬಿ ಜಿ ಶಶಿಕಾಂತ್ ಜೈನ್ ರ ಪುತ್ರ ಎಸ್ ಕೆ ಜೈನ್ ಮೊದಲಿಗೆ ಇಂಜಿನಿಯರ್ ಆಗಬೇಕೆಂದುಕೊಂಡವರು. ಆದರೆ ಅದನ್ನ ಕೈಬಿಟ್ಟು ತಂದೆಯ ಬಳಿಯಲ್ಲಿ ಜ್ಯೋತಿಷ್ಯವನ್ನೇ ರೂಢಿಸಿಕೊಂಡರು. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನ ನೆಡೆಸಿಕೊಡುವುದರ ಮೂಲಕ ಕನ್ನಡ ವಿದ್ಯುನ್ಮಾನ ಮಾಧ್ಯಮದ ಮೊಟ್ಟಮೊದಲ ಜ್ಯೋತಿಷಿ ಎಂಬ ಹೆಸರಿನೊಂದಿಗೆ ಖ್ಯಾತಿಯನ್ನ ಹೊಂದಿದ್ದರು.
ಬಳಿಕ ಖಾಸಗಿ ವಾಹಿನಿಯಲ್ಲೂ ಜ್ಯೋತಿಷ್ಯ ಶಾಸ್ತ್ರವನ್ನು ಹೇಳುತ್ತಿದ್ದರು. ಹಬ್ಬ-ಹರಿದಿನ, ಗ್ರಹಣ ಸೇರಿದಂತೆ ವಿಶೇಷ ದಿನಗಳಂದು ವಾಹಿನಿಗಳಲ್ಲಿ ರಾಶಿ ಫಲಾಫಲ ಸೇರಿದಂತೆ ದಿನದ ವಿಶೇಷತೆಗಳ ಬಗ್ಗೆ ಜ್ಯೋತಿಷ್ಯ ಹೇಳುತ್ತಿದ್ದರು. ಆದರೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















