ಶಿವಮೊಗ್ಗ: ಈ ಬಾರಿ ಮುಂಗಾರು, ಹಿಂಗಾರು ಮಳೆ ಕೈಕೊಟ್ಟ ಕಾರಣ ಬೇಸಿಗೆಗೂ ಮುನ್ನವೇ ಧಗೆ ಹೆಚ್ಚಾಗಿತ್ತು. ಸೂರ್ಯನ ಶಾಖಕ್ಕೆ ಭೂಮಿಯ ಉಷ್ಣಾಂಶ ಹೆಚ್ಚಾಗಿತ್ತು. ಹೀಗಾಗಿ ಜನ ಬೇಸಿಗೆ ಬಿಸಿಲಿನಿಂದ ನಾನಾ ಕಾಯಿಲೆಗಳಿಗೆ ತುತ್ತಾಗಿದ್ದರು. ಬಿಸಿಲಿನಿಂದ ಬಚಾವ್ ಆಗುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದರು. ಬಿಸಿಲಿನ ತಾಪ ಸಹಿಸಲಾರದೆ ಮಳೆಯಾದರೂ ಬೇಗ ಬರಲಿ ಎಂದೇ ಬೇಡಿಕೊಳ್ಳುತ್ತಿದ್ದರು. ಆ ಮನವಿ ವರುಣರಾಯನಿಗೆ ಕೇಳಿಸಿದೆ.
ಯುಗಾದಿ ಸಮಯದಲ್ಲಿ ಹಲವೆಡೆ ಮಳೆ ಬಂದಿದೆ. ಇನ್ನು ಹಲವೆಡೆ ಇನ್ನು ಮಳೆ ಆಗುತ್ತಲೆ ಇದೆ. ಏಪ್ರಿಲ್ 12 ರಿಂದ 14ರವರೆಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ, ಇನ್ನು ಹಲವೆಡೆ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಮಲೆನಾಡು ಭಾಗದ ಜನರಿಗೆ ಮಳೆರಾಯ ಜೋರಾಗಿಯೇ ತಂಪೆರೆದಿದ್ದಾನೆ. ದಾವಣಗೆರೆ, ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಶಿವಮೊಗ್ಗದ ಸುತ್ತಮುತ್ತ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ವರ್ಷಧಾರೆ ಸುರಿದಿದೆ. ಬಿರು ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರು ಸುಮಾರು ಎರಡು ಗಂಟೆಗಳ ಕಾಲ ಸುರಿದ ವರುಣನ ಅಬ್ಬರದಿಂದ ಸಂತಸಗೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














