Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಡ ಜನರ ಆಶಾಕಿರಣವಾದ ಕಾಂಗ್ರೆಸ್ಸಿನ ಪಂಚ ಯೋಜನೆಯಿಂದ ರಾಜ್ಯದ ಬಡ ಜನತೆಗೆ ಅನುಕೂಲವಾಗಿದೆ: ಸತೀಶ್ ಜಾರಕಿಹೊಳಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 14 :  ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಿಂದ ರಾಜ್ಯದ ಬಡ ಕುಟುಂಬಗಳಾದ ಕೂಲಿ ಕಾರ್ಮಿಕರು ಮಹಿಳೆಯರು ರೈತರು  ವೃದ್ಧರು ವಿಧವೆಯರು ಜನಸಾಮಾನ್ಯರು ಸೇರಿದಂತೆ ಎಲ್ಲ ಸಮುದಾಯಗಳಿಗೆ ಸಮಾನ ಪಂಚಭಾಗ್ಯಗಳನ್ನು ನೀಡಿ ನಿರಾಶ್ರಿತರ ಕಣ್ಣೀರು ಒರೆಸಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇವರು ನಗರದ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶ ಹಾಗೂ ಡಾಕ್ಟರ್ ಬಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಇವರು,

ಇತ್ತೀಚಿನ ದಿನಗಳಲ್ಲಿ ಮಳೆ ಬೆಳೆ ಇಲ್ಲದೆ ಬರ ಆವರಿಸಿಕೊಂಡು ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು, ಹತಾಶರಾಗಿದ್ದಾರೆ ಈ ಹಿನ್ನೆಲೆಯಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರದ ಪಂಚ ಭಾಗ್ಯಗಳಾದ ಹೆಣ್ಣು ಮಕ್ಕಳಿಗೆ ಬಸ್ ಫ್ರೀ, ಮಹಿಳೆಯರಿಗೆ 2000 ಮಾಸಿಕ ವೇತನ , ಹತ್ತು ಕೆಜಿ ಅಕ್ಕಿ, ವಿದ್ಯಾರ್ಥಿಗಳಿಗೆ 3000 ವೇತನ, 200 ವ್ಯಾಟ್ ವಿದ್ಯುತ್ ಫ್ರೀ, ಮಾಡಿ ಬಡ ಕುಟುಂಬಗಳಿಗೆ ಆಶ್ರಯವಾಗಿದೆ,

ಇದು ಅಲ್ಲದೆ ಕೇಂದ್ರದಲ್ಲಿ ಕಾಂಗ್ರೆಸ್ ಹಾಗೂ ಘಟಬಂಧನ್ ಸರ್ಕಾರ ಆಡಳಿತಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ಫ್ರೀ, ಅಲ್ಲದೆ 25 ಗ್ಯಾರಂಟಿಗಳನ್ನು ಜನಸಾಮಾನ್ಯರಿಗೆ ನೀಡುತ್ತೇವೆ,

ಈ ನಿಟ್ಟಿನಲ್ಲಿ ಬಡವರ ಪಕ್ಷವಾದ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಚಿತ್ರದುರ್ಗ ಲೋಕಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾದ ಚಂದ್ರಪ್ಪನವರನ್ನು ಅತಿಹೆಚ್ಚಿನ ಮತದಲ್ಲಿ  ಜಯಶೀಲರನ್ನಾಗಿ ಮಾಡಿ ಎಂದು ಹೇಳಿದರು,

ಇನ್ನು ಈ ವೇಳೆ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವ ಡಿ ಸುಧಾಕರ್ ಮಾತನಾಡಿ ನಮ್ಮ ಕಾಂಗ್ರೆಸ್ ಸರ್ಕಾರ ಬಂದು ಬಡತನ ನಿರ್ಮೂಲನೆಯಾಗಿದೆ,

ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನತೆಗೆ ಹೇಳಿದಂತೆ ನಡೆದುಕೊಂಡಿದ್ದಾರೆ ಬಿಜೆಪಿ ರವರು ಸುಳ್ಳು ಭರವಸೆಗಳನ್ನು ಕೊಟ್ಟು ಜನಸಾಮಾನ್ಯರಿಗೆ ಜಾತಿ ಜಾತಿಗೆ ನಡುವೆ ವಿಷ ಬೀಜ ಬಿತ್ತಿ ರಾಷ್ಟ್ರ ಹಾಗೂ ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸಿದ್ದಾರೆ

ಕಳೆದ ಕೆಲವು ವರ್ಷಗಳಿಂದ ಭದ್ರಾ ಮಲ್ದೆ ಮೇಲ್ದಂಡೆ ಯೋಜನೆ ಸ್ಥಗಿತಗೊಂಡಿದ್ದು ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಬದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಡಿ ಎಂದು ಕೇಳಿದರೆ ನಮ್ಮಲ್ಲಿ ಹಣವಿಲ್ಲವೆಂದು ಹಾರಕ್ಕೆ ಉತ್ತರ ಹೇಳಿದ್ದಾರೆ, ಈ ಒಂದು ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇವಲ ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಚಿತ್ರದುರ್ಗ ಜಿಲ್ಲೆಯಲ್ಲಿ ಬರುವ ಹಲವಾರು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುತ್ತೇವೆ ಇದರಿಂದಾಗಿ ಕೇಂದ್ರ ಬಿಜೆಪಿ ಸುಳ್ಳು ಭರವಸೆಗಳನ್ನು ನಂಬದೇ ವಿಶ್ವಾಸವುಳ್ಳ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಚಂದ್ರಪ್ಪನವರಿಗೆ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿಕೊಡಿ ಎಂದು ಹೇಳಿದರು,

ಇನ್ನು ಈ ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರದ ಎಂಎಲ್ಎ ವೀರೇಂದ್ರ ಪಪ್ಪಿ,   ಮೊಣಕಾಲ್ಮೂರು ಎಂಎಲ್ಎ ಎಂ ವ್ಯ ಗೋಪಾಲಕೃಷ್ಣ, ಚಳ್ಳಕೆರೆ ಕ್ಷೇತ್ರದ ಎಂಎಲ್ಎ ಟಿ ರಘುಮೂರ್ತಿ, ಎಚ್ ಆಂಜನೇಯ, ಲೋಕಸಭೆ ಅಭ್ಯರ್ಥಿ ಡಿಎಚ್ ಚಂದ್ರಪ್ಪ, ಸಮಾರಂಭದಲ್ಲಿ ಮಾತನಾಡಿದರು,

ಇನ್ನು ಈ ಸಂದರ್ಭದಲ್ಲಿ ಜಿ.ಎಸ್. ಮಂಜುನಾಥ್, ಅನ್ವರ್ ಪಾಷಾ, ಓ ಶಂಕರ್, ಕೃಷ್ಣಮೂರ್ತಿ, ಗೀತಾನಂದಿನಗೌ ಮಂಜುನಾಥಗೌಡ, ರೈತರ ಸಂಘದ ಮುಖಂಡ ಸೋಮಗುದ್ದು ರಂಗಸ್ವಾಮಿ,  ವಿಜಯ್ ಕುಮಾರ್, ನಾಗರಾಜ್, ಸೈಯದ್, ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು,

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!