Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ತಂದೆ ಸಾಧನೆಗಳನ್ನು ಜನರ ಮುಂದಿಟ್ಟು ಮತ ಕೇಳಿದ ಉಮೇಶ್ ಕಾರಜೋಳ…!

---Advertisement---

 

ಸುದ್ದಿಒನ್, ಹಿರಿಯೂರು, ಏಪ್ರಿಲ್.14  : ನೀರಾವರಿ ಕ್ಷೇತ್ರಕ್ಕೆ ತಂದೆಯ ಕೊಡುಗೆ ಅಪಾರವಾಗಿದೆ. ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಅವರನ್ನೇ ಗೆಲ್ಲಿಸಿ ಎಂದು ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ್ ಕಾರಜೋಳ ಜನರಲ್ಲಿ ಮನವಿ ಮಾಡಿದ್ದಾರೆ.

ತಾಲೂಕಿನ ಎಂಡಿ. ಕೋಟೆ, ಮದ್ದನಕುಂಟೆ, ಸೊಂಡೆಕೆರೆ, ರಾಮಜೋಗಿಹಳ್ಳಿ, ವದ್ದೀಕೆರೆ, ಬಿದರಿಕೆರೆ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮೈತ್ರಿ ಅಭ್ಯರ್ಥಿ ಹಾಗೂ ತಂದೆ ಗೋವಿಂದ ಕಾರಜೋಳ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ಅವರು, ಚಿತ್ರದುರ್ಗ – ಹಿರಿಯೂರು ಮಧ್ಯೆ ವಿಮಾನ ನಿಲ್ದಾಣಕ್ಕೆ ಆಧ್ಯತೆ ನೀಡುವುದರ ಜೊತೆಗೆ ಜಿಲ್ಲೆಯನ್ನು ಮೇಲ್ದರ್ಜೆಗೇರಿಸಲು ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗುತ್ತದೆ ಎಂದರು. ಹಿರಿಯೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು, ಒಟ್ಟಾಗಿ ಚುನಾವಣೆ ಎದುರಿಸಲಾಗುತ್ತಿದೆ.

ದೇಶದಲ್ಲಿ 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶವನ್ನು ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಶೂನ್ಯವಾಗಿದ್ದು, ಜಿಲ್ಲೆಯ ಬಹು ನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇತ್ತ ಜಿಲ್ಲೆಯಲ್ಲಿ ಬರ ತಾಂಡವಾಡುತ್ತಿದ್ದು, ಕುಡಿಯುವ ನೀರು ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...