Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೀಠ ಬೇಕಾ..? ರಾಜಕೀಯ ಬೇಕಾ..? : ದಿಂಗಾಲೇಶ್ವರ ಸ್ವಾಮೀಜಿ ಆಯ್ಕೆಗೆ ಬಿಟ್ಟ ಭಕ್ತರು

Facebook
Twitter
Telegram
WhatsApp

ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಹ್ಲಾದ ಜೋಶಿ ಅವರು ಕಣದಲ್ಲಿದ್ದಾರೆ. ಅವರ ಸ್ಪರ್ಧೆಯನ್ನು ಖಂಡಿಸಿ, ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧೆ ನಡೆಸಿದ್ದಾರೆ. ಆದರೆ ಇದು ಭಕ್ತರಲ್ಲಿಯೇ ಗೊಂದಲವನ್ನುಂಟು ಮಾಡಿದೆ‌. ಹಲವರು ಸ್ವಾಮಿಗಳ ಸ್ಪರ್ಧೆಗೆ ಬೆಂಬಲ ನೀಡಿದರೆ, ಇನ್ನು ಹಲವು ಭಕ್ತರು ಬೇಡ ಎಂದೇ ಹೇಳುತ್ತಿದ್ದಾರೆ. ಇದೀಗ ರಾಜಕೀಯ ಅಥವಾ ಪೀಠ ಯಾವುದು ಬೇಕು ಎಂಬ ಆಯ್ಕೆಯನ್ನು ಸ್ವಾಮೀಜಿಗಳೇ ಮಾಡಬೇಕೆಂದು ಭಕ್ತರು ಮನವಿ ಮಾಡಿದ್ದಾರೆ.

ಭಕ್ತರು ಈ ಬಗ್ಗೆ ಸ್ವಾಮೀಜಿಯ ಆಯ್ಕೆಗೆ ಬಿಟ್ಟಿದ್ದು, ಏಪ್ರಿಲ್ 18ರವರೆಗೂ ಕಾಯುತ್ತೇವೆ. ದಿಂಗಾಲೇಶ್ವರ ಸ್ವಾಮೀಜಿಗಳು ಚುನಾವಣೆಗೆ ಸ್ಪರ್ಧಿಸುವ ವಿಚಾರವನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕು. ಇಲ್ಲದಿದ್ದರೆ ಶಿರಹಟ್ಟಿ ಫಕೀರೇಶ್ವರ ಪೀಠವನ್ನು ತೊರೆಯಬೇಕು. ಶಿರಹಟ್ಟಿ ಫಕಿರೃಶ್ವರ ಮಠದ ಪೀಠವೂ ಕೋಮು ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಸ್ವಾಮೀಜಿಗಳು ರಾಜಕೀಯಕ್ಕೆ ಬರದೆ, ಭಕ್ತರಿಗೆ ದಾರಿ ತೋರಿಸಬೇಕು.

 

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲಿಂಗಾಯತರಿಗೆ ಅನ್ಯಾಯ ಮಾಡಿದ್ದರೆ, ಅದನ್ನು ಪ್ರಜ್ಞಾವಂತರು ಬಹಿರಂಗ ಪಡಿಸಬೇಕು. ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಮಠದ ಭಕ್ತರಿಗೂ ಒಳ್ಳೆಯದಲ್ಲ ಎಂದು ಗದಗ, ಲಕ್ಷ್ಮೇಶ್ವರ ಸೇರಿದಂತೆ ವಿವಿಧ ಭಾಗಗಳ ಮಠದ ಭಕ್ತರು ದಿಂಗಾಲೇಶ್ವರ ಶ್ರೀಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದ ದಿಂಗಾಲೇಶ್ವರ ಶ್ರೀಗಳಿಗೆ ಇದೊಂದು ರೀತಿಯ ಆಘಾತ ತಂದಿದೆ. ಲಿಂಗಾಯತ ಸಮುದಾಯದ ಭಕ್ತರೆಲ್ಲ ಬೆಂಬಲಕ್ಕೆ ನಿಲ್ಲುತ್ತಾರೆ ಎಂದುಕೊಂಡಿದ್ದ ಊಹೆ ತಪ್ಪಾಗಿದೆ. ಈಗ ಸ್ವಾಮೀಜಿಗಳು ಯಾವ ನಿರ್ಧಾರಕ್ಕೆ ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!