Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‌ ಆರ್‌ ಎಸ್‌ ಚಾಣಕ್ಯ -2024 ಫೌಂಡೇಷನ್‌ ತರಗತಿಗಳು ಆರಂಭ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.15 :  ಹತ್ತನೇ ತರಗತಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಮುಂದೆ ಪಿಯುಸಿಯಲ್ಲಿ ಕಲಿಯಬೇಕಾದ ವಿಜ್ಞಾನ ವಿಷಯಗಳ ಬಗ್ಗೆ ಚಿತ್ರದುರ್ಗದ ಎಸ್ ಆರ್ ಎಸ್ ಪಿಯು ಕಾಲೇಜಿನಲ್ಲಿ  ನುರಿತ ಅನುಭವಿ ಉಪನ್ಯಾಸಕರಿಂದ ಬಹು ಆಯ್ಕೆ ಮಾದರಿಯಲ್ಲಿ ನೀಟ್‌, ಜೆಇಇ, ಸಿಇಟಿ ಪರೀಕ್ಷೆಗಳಿಗೆ ಅನುಗುಣವಾಗಿ ಸುಮಾರು 25 ದಿನಗಳ ಕಾಲ ನಡೆಯುವ ಚಾಣಕ್ಯ ಫೌಂಡೇಷನ್‌ ತರಗತಿಗಳ ಬೇಸಿಗೆ ಶಿಬಿರ ಏಪ್ರಿಲ್‌ 15ರಂದು ಉದ್ಘಾಟನೆಯಾಯಿತು.

ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ರವಿ ಟಿ.ಎಸ್‌ ಅವರು ಓರ್ವ ವ್ಯಕ್ತಿ ಜಗತ್ತಿಲ್ಲಿ ಶ್ರೀಮಂತ ಎನಿಸಿಕೊಳ್ಳಬೇಕಾದರೆ ಹಣದಿಂದಲ್ಲ, ಜ್ಞಾನದಲ್ಲಿ ಶ್ರೀಮಂತನಾಗಬೇಕು ಎಂದು ಹೇಳುತ್ತಾ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

ನೀಟ್‌, ಜಿಇಇ, ತರಬೆತಿಯ ಸಂಚಾಲಕರಾದ ಶ್ರೀ ಶ್ರೀನಿವಾಸ ಕುಮಾರ್‌ ಡಿ, ಹಾಗೂ ಶ್ರೀ ಅಮಾನ್‌ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಸಂಸ್ಕಾರ ಮುಖ್ಯ ಎಂದು ಹೇಳಿದರು.

ಕನ್ನಡ ಉಪನ್ಯಾಸಕರಾದ ಅಣ್ಣಪ್ಪ  ಎಚ್‌. ಇವರು ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಉಪ ಪ್ರಾಂಶುಪಾಲರಾದ ಶ್ರೀ ಮನೋಹರ ಬಿ ಅವರು ನೀಟ್‌, ಜೆಇಇ ಹಾಗೂ ಸಿಇಟಿ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!