Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂಬೇಡ್ಕರ್ ತತ್ವಾದರ್ಶ ಅಳವಡಿಕೆಯಿಂದ ಸಮ ಸಮಾಜ ನಿರ್ಮಾಣ : ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗ್

Facebook
Twitter
Telegram
WhatsApp

ಚಿತ್ರದುರ್ಗ, ಏ.15:   ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶ ಅಳವಡಿಸಿಕೊಂಡು ಪಾಲಿಸುವ ಮುಖಾಂತರ ಸಮ ಸಮಾಜ, ಜಾತಿ ವ್ಯವಸ್ಥೆ ಮೀರಿದ ಸಮಾಜ ನಿರ್ಮಾಣದಲ್ಲಿ  ಕೈಜೋಡಿಸಲು ಸರ್ವರೂ ದಿಟ್ಟ ಹೆಜ್ಜೆ ಇಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಗ್ ಹೇಳಿದರು.

ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ  ಅಂಬೇಡ್ಕರ್‍ರವರ 133ನೇ ಜಯಂತಿಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಅಸ್ಪøಶ್ಯತೆಯಂತಹ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿ, ಶಿಕ್ಷಣದಿಂದಲೇ ಅಭಿವೃದ್ಧಿ ಸಾಧ್ಯ ಎಂಬ ನಿಲುವು ಹೊಂದಿದ್ದರು ಎಂದು ಹೇಳಿದರು.


ಪ್ರಾದೇಶಿಕ ಸಾರಿಗೆ ಕಛೇರಿ  ಅಧೀಕ್ಷಕ ಹೇಮಂತ್ ಕುಮಾರ್ ಮಾತನಾಡಿ, ನಾವೆಲ್ಲರೂ ತಿಳಿದಿರುವಂತೆ ಅಂಬೇಡ್ಕರ್‍ರವರು ಸಂವಿಧಾನ ಶಿಲ್ಪಿ ಎಂದಷ್ಟೇ. ಅದಲ್ಲದೇ ಅವರು ನುರಿತ ಆರ್ಥಿಕ ತಜ್ಞರೂ ಕೂಡ ಆಗಿದ್ದರು. ಇವರು ಕೈಗೊಂಡ ಅಧ್ಯಯನ ಹಾಗೂ ಇವರಿಗಿರುವ ಜ್ಞಾನಸಂಪತ್ತಿಗೆ ಕೊಲಂಬಿಯಾ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ವಿದೇಶಿ ವಿದ್ಯಾಲಯದಿಂದ ಪದವಿ ಪಡೆದ ಮೊದಲಿಗನೆಂಬ ಖ್ಯಾತಿ ಅಂಬೇಡ್ಕರ್‍ರವರಿಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ನೀನಾಸಂ ಕಲಾವಿದರು ಹಾಗೂ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರು ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!