Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದ್ವಾರಕೀಶ್ ಗಾಡ್ ಫಾದರ್ ಆಗಿದ್ದರು ಚಿತ್ರದುರ್ಗದ ಜಾಫರ್ ಶರೀಫ್ : ಜಾಫರ್ ನಿಧನದ ದಿನ ದ್ವಾರಕೀಶ್ ಏನ್ ಹೇಳಿದ್ರು ಗೊತ್ತಾ..?

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ಇಂದು ದ್ವಾರಕೀಶ್ ಅವರು ಇಲ್ಲ. ಜಾಫರ್ ಶರೀಫ್ ಅವರೂ ಇಲ್ಲ. ಆದರೆ ಅವರಿಬ್ಬರ ಬಾಂಧವ್ಯ ಗಟ್ಟಿಯಾಗಿತ್ತು. ಆತ್ಮೀಯತೆ ಹೆಚ್ಚಾಗಿತ್ತು. ಅಣ್ಣ ತಮ್ಮಂದಿರಂತೆ ಸಂಬಂಧ ಹೊಂದಿದ್ದವರು. ವಯೋಸಹಜ ಕಾಯಿಲೆಯಿಂದ ಇಂದು ದ್ವಾರಕೀಶ್ ನಿಧನ ಹೊಂದಿದ್ದಾರೆ. ಈ ಸಂದರ್ಭದಲ್ಲಿ ಜಾಫರ್ ಶರೀಫ್ ನಿಧನದ ಸಂದರ್ಭದಲ್ಲಿ ಮಾತನಾಡಿದ ಆಡಿಯೋ ಕೂಡ ಹರಿದಾಡುತ್ತಿದೆ.

 

ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಕಳೆದ 5 ವರ್ಷಗಳ ಹಿಂದೆ ಅಂದರೆ 25‌ ನವೆಂಬರ್ 2018ರಲ್ಲಿ ನಿಧನ ಹೊಂದಿದ್ದರು. ಆಗ ಅವರ ವಯಸ್ಸು 85 ಆಗಿತ್ತು.  1993ರಲ್ಲಿ ಚಳ್ಳಕೆರೆಯಲ್ಲಿ ಜನಿಸಿದ್ದವರು ಜಾಫರ್ ಶರೀಫ್. ಕೇಂದ್ರ ರೈಲ್ವೆ ಸಚಿವರಾಗಿದ್ದರು, ಇಂದಿರಾ ಗಾಂಧಿಯವರಿಗೆ ಆಪ್ತರಾಗಿದ್ದವರು. ರಾಜ್ಯದ ರೈಲ್ವೆಯ ಗೇಜ್ ಮಾರ್ಪಾಡು ಸಾಧನೆಯಲ್ಲಿ ಇವರದ್ದು ಮಹತ್ವದ ಪಾತ್ರವಿದೆ. ಆದರೆ ಕಳೆದ ಐದು ವರ್ಷಗಳ ಹಿಂದೆ‌ ನಿಧನ ಹೊಂದಿದರು.

ಇನ್ನು ನಟ, ನಿರ್ದೇಶಕ ದ್ವಾರಕೀಶ್ ಅವರಿಗೂ ಜಾಫರ್ ಶರೀಫ್ ಅವರಿಗೂ ಗಟ್ಟಿಯಾದ ನಂಟೊಂದಿತ್ತು. ಅವರ ಸಾವಿನ ದಿನ ಮಾತನಾಡಿದ್ದ ದ್ವಾರಕೀಶ್, ನಂಗೆ ಗಾಡ್ ಫಾದರ್ ಅಂತ ಇದ್ದರೆ ಅದು ಜಾಫರ್ ಶರೀಫ್ ಮಾತ್ರ. ನಂಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರು. ನನ್ನ ಹೆಂಡತಿಯೂ ಚಿತ್ರದುರ್ಗ, ಅವರು ಚಿತ್ರದುರ್ಗ‌ದವರು. ಮದ್ರಾಸ್ ನಲ್ಲಿದ್ದಾಗ ನಮ್ಮನ್ನ ನೋಡುವುದಕ್ಕೆ ಬರುತ್ತಾ ಇದ್ದರು. ಇಂದು ಈ ಸಾವಿನ ಸುದ್ದಿ ನಂಬುವುದಕ್ಕೆ ಆಗುತ್ತಿಲ್ಲ’ ಎಂದು ಕಣ್ಣೀರು ಹಾಕಿದ್ದರು. ಆದರೆ ಇಂದು ದ್ವಾರಕೀಶ್ ಕೂಡ ಪ್ರೀತಿ ಪಾತ್ರರನ್ನು ಬಿಟ್ಟು ಗೆಳೆಯನನ್ನು ಸೇರುವುದಕ್ಕೆ ಹೊರಟೆ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!