Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾವುದೇ ಕೋಚಿಂಗ್ ಪಡೆಯದೆ ಐಎಎಸ್ ಪರೀಕ್ಷೆ ಪಾಸ್ ಮಾಡಿದ ದಾವಣಗೆರೆಯ ಸೌಭಾಗ್ಯ ಬಗ್ಗೆ ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

ಧಾರವಾಡ: ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ಧಾರವಾಡದ ವಿದ್ಯಾರ್ಥಿನಿಯೊಬ್ಬರು ರಾಜ್ಯಕ್ಕೆ 101ನೇ ರ್ಯಾಂಕ್ ಪಡೆದಿದ್ದಾರೆ. ಧಾರವಾಡದ ವಿವಿಯಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಅಗ್ರಿ ಪದವಿ ಮಾಡುತ್ತಿದ್ದಾರೆ. ಆದರೆ ಮೊದಲಿನಿಂದಾನೂ ಐಎಎಸ್ ಅಧಿಕಾರಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದವರು.‌ ಇಂದು ಆ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಸೌಭಾಗ್ಯ ಎಸ್ ಬೀಳಗಿಮಠ ಮೂಲತಃ ದಾವಣಗೆರೆಯವರು. ಐಎಎಸ್ ಮಾಡುವ ಕನಸು ಹೊತ್ತುಕೊಂಡು ಧಾರಾವಾಡಕ್ಕೆ ಬಂದರು. 2018ಕ್ಕೆ ಧಾರವಾಡದ ವಿಶ್ವ ವಿದ್ಯಾಲಯಕ್ಕೆ ಬಂದರು. ತಮಗೆ ಶಿಕ್ಷಣ ನೀಡುವ ಪ್ರಾಧ್ಯಾಪಕರಾದ ಡಾ.ಅಶ್ವಿನಿ ಎಂ. ಅವರ ನಿವಾಸದಲ್ಲೇ ಉಳಿದು ವಿದ್ಯಾಭ್ಯಾಸ ಮಾಡಿದ ಸೌಭಾಗ್ಯ, ಅಶ್ವಿನಿ ಅವರ ಕೊಟ್ಟ ತರಬೇತಿಯನ್ನು ಪಡೆದು ಇದೀಗ ಮೊದಲ ಪ್ರಯತ್ನದಲ್ಲೇ ದೇಶದ ಅತ್ಯುನ್ನತ ಪರೀಕ್ಷೆಯಾದ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸು ಮಾಡಿದ್ದಾರೆ. ಇನ್ನು ಸೌಭಾಗ್ಯ ಅವರನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ತರಬೇತಿ ನೀಡಿದ ಪ್ರಾಧ್ಯಾಪಕಿ ಡಾ.ಅಶ್ವಿನಿ, ತಮ್ಮ ವಿದ್ಯಾರ್ಥಿನಿ ಮಾಡಿದ ಸಾಧನೆಗೆ ಖುಷಿ ವ್ಯಕ್ತಪಡಿಸಿದ್ದಾರೆ.

 

ಸೌಭಾಗ್ಯ ಯಾವುದೇ ತರಬೇತಿ ಪಡೆಯಲಿಲ್ಲ, ನಾನೇ ಆಕೆಗೆ ಗೊತ್ತಿದ್ದಷ್ಟು ತರಬೇತಿ ನೀಡಿದೆ. ನನ್ನ ವಿದ್ಯಾರ್ಥಿನಿ ಇಂತಹ ಸಾಧನೆ ಮಾಡಿದ್ದಕ್ಕೆ ಖುಷಿಯಾಗಿದೆ ಎಂದು ಡಾ. ಅಶ್ವಿನಿ ಅವರು ಹೇಳಿದ್ದಾರೆ. ಕಷ್ಟಪಟ್ಟು ಓದುವ ವಿದ್ಯಾರ್ಥಿನಿ ಮನಸ್ಸುಗಳಿಗೆ ಈ ರೀತಿಯ ಶಿಕ್ಷಕರು ಸಿಕ್ಕಿದರೆ ಖಂಡಿತ ಸಾಧನೆಯ ಶಿಖರಕ್ಕೆ ಏರಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!