Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ಧಾರೂಢ ಶ್ರೀಗಳ ಹುಟ್ಟುಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ

Facebook
Twitter
Telegram
WhatsApp

ಹುಬ್ಬಳ್ಳಿ: ಇಂದು ರಾಜ್ಯಾದ್ಯಂತ ಶ್ರೀರಾಮನವಮಿಯ ಸಂಭ್ರಮ ಮನೆ ಮಾಡಿದೆ. ಇದರ ಜೊತೆಗೆ ಇಂದು ಹುಬ್ಬಳ್ಳಿಯ ಸಿದ್ದಾರೂಢ ಸ್ವಾಮೀಜಿಗಳ ಹುಟ್ಟುಹಬ್ಬ ಕೂಡ. ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳ 188ನೇ ಹುಟ್ಟುಹಬ್ಬ. ಈ ಸುಸಂದರ್ಭಕ್ಕೆ ಪ್ರಧಾನಿ ಮೋದಿ ಅವರು ಶುಭಕೋರಿದ್ದಾರೆ.

‘ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯ ಜಯಂತಿಯಂದು ಅವರಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ, ಸಾಮರಸ್ಯ ಮತ್ತು ವಂಚಿತರ ಸಬಲೀಕರಣಕ್ಕೆ ನೀಡಿದ ಕೊಡುಗೆಗಳಿಗೆ ಸ್ಮರಿಸಲಾಗುತ್ತದೆ. ಶ್ರೀ ಸಿದ್ಧಾರೂಢ ಸ್ವಮೀಜಿ ಅವರ ಜೀವನ ಮತ್ತು ಕಾರ್ಯಗಳು ಎಲ್ಲ ಜೀವಿಗಳ ಕಲ್ಯಾಣಕ್ಕೆ ಗಾಢವಾದ ಬದ್ಧತೆಗೆ ನಿದರ್ಶನವಾಗಿವೆ. ಅವರು ಯಾವಾಗಲೂ ಏಕತೆ ಮತ್ತು ದಯೆಯ ಮಹತ್ವವನ್ನು ಎತ್ತಿ ತೋರಿಸಿದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಸದಾ ಶ್ರಮಿಸುತ್ತೇವೆ’ ಎಂದು ಟ್ವೀಟ್ ಮೂಲಕ ಶುಭಕೋರಿದ್ದಾರೆ.

 

ಶ್ರೀ ಸಿದ್ಧಾರೂಢರು 6 ವರ್ಷದವರಿದ್ದಾಗಲೇ ಮನೆಯನ್ನು ತೊರೆದು ದೇಶ ಸಂಚಾರಕ್ಕೆ ಹೊರಟರು. ಶ್ರೀ ಸಿದ್ಧಾರೂಢರ ಆಧ್ಯಾತ್ಮಿಕ ಗುರುಗಳಾದ ಪೂಜ್ಯಶ್ರೀ ಗಜದಂಡ ಶಿವಯೋಗಿಗಳು ಶ್ರೀ ಸಿದ್ಧಾರೂಢರಿಗೆ ಸಿದ್ಧಾರೂಢ ಭಾರತಿ ಎಂದು ನಾಮಕರಣ ಮಾಡಿದರು. ಮುಂದೆ ಶ್ರೀ ಸಿದ್ಧಾರೂಢರು ಹುಬ್ಬಳ್ಳಿಗೆ ಬಂದು ನೆಲಸಿದರು. ಹುಬ್ಬಳ್ಳಿಯಲ್ಲಿ ಮಠವನ್ನು ಕಟ್ಟಿ ನಿತ್ಯ ಮಠಕ್ಕೆ ಬರುವ ಭಕ್ತರಿಗೆ ಪ್ರವಚ ಹೇಳುತ್ತಾ ಅಧ್ಯಾತ್ಮದ ಪಥಕ್ಕೆ ಹಚ್ಚಿದರು. ಶ್ರೀ ಸಿದ್ಧಾರೂಢರು ಪವಾಡ ಪುರುಷರಾಗಿದ್ದು, ಇಂದಿಗೂ ಕೂಡ ಮಠದಲ್ಲಿ ಪವಾಡಗಳು ನಡೆಯುತ್ತವೆ ಎಂಬುವುದು ಭಕ್ತರ ನಂಬಿಕೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

High Blood Pressure : ಅಧಿಕ ರಕ್ತದೊತ್ತಡ ಎಷ್ಟು ಅಪಾಯಕಾರಿ ಗೊತ್ತಾ ?

ಸುದ್ದಿಒನ್ : ಅಧಿಕ ರಕ್ತದೊತ್ತಡ ಎನ್ನುವುದು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಈ ಸಮಸ್ಯೆ ಇದ್ದರೆ ಪ್ರತಿದಿನ ವೈದ್ಯರ ಸಲಹೆಯಂತೆ ಔಷಧಿ ತೆಗೆದುಕೊಳ್ಳಬೇಕು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು?

ಈ ರಾಶಿಯವರು ಏನೇ ಪ್ರಯತ್ನಿಸಿದರು ಸೋಲುಗಳ ಮೇಲೆ ಸೋಲು ಏಕೆ? ಇದಕ್ಕೆಲ್ಲ ಕಾರಣವೇನು? ಮಂಗಳವಾರ ರಾಶಿ ಭವಿಷ್ಯ -ಮೇ-21,2024 ನರಸಿಂಹ ಜಯಂತಿ ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!