Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವದ್ದೀಕೆರೆ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಏಪ್ರಿಲ್ 22 ರಂದು ಬ್ರಹ್ಮ ರಥೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ. ಏ.17 : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿಯ ವದ್ದೀಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರಸ್ವಾಮಿ ಯಾನೆ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಇದೇ ಏಪ್ರಿಲ್ 19 ರಿಂದ 24 ರವರೆಗೆ ನಡೆಯಲಿದ್ದು, ಏ.22ರಂದು ಬ್ರಹ್ಮ ರಥೋತ್ಸವ ನಡೆಯಲಿದೆ.  

 

ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಏ.19ರಂದು ರಾತ್ರಿ 8 ಗಂಟೆಗೆ ಕಂಕಣಧಾರಣೆ, ಏ.20ರಂದು ರಾತ್ರಿ 7 ಗಂಟೆಗೆ ಅಗ್ನಿಕುಂಡ, ಏ. 21ರಂದು ರಾತ್ರಿ 8 ಗಂಟೆಗೆ ಚಿಕ್ಕ ರಥೋತ್ಸವ ಕಾರ್ಯ ಜರುಗಲಿದೆ. ಏ. 22ರಂದು ಮಧ್ಯಾಹ್ನ 3.30ಕ್ಕೆ ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಜಾನಪದ ಕಲಾವಿದರಿಂದ ವೈವಿದ್ಯಮಯ ಮೆರವಣಿಗೆ ನಡೆಯಲಿದ್ದು, ಅದೇ ದಿನ ಸಂಜೆ 4.30ಕ್ಕೆ ಬ್ರಹ್ಮ ರಥೋತ್ಸವ ಜರುಗಲಿದೆ.

 

ಏ.23ರಂದು ಉಂಡೆ, ಮಂಡೆ, ಸಿದ್ಧಭುಕ್ತಿ ಕಾರ್ಯ ಹಾಗೂ ಏ.24 ರಂದು ಕಿರುಬಾನ, ವಸಂತೋತ್ಸವ ಮತ್ತು ಸಂಜೆ 6ಕ್ಕೆ ಕಂಕಣ ವಿಸರ್ಜನೆ ಕಾರ್ಯ ನಡೆಯಲಿದೆ ಎಂದು ಹಿರಿಯೂರು ತಹಶೀಲ್ದಾರ್ ಸಿ.ರಾಜೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!