Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ ಮಗಳ ಅತ್ಯಾಚಾರದ ಬೆದರಿಕೆ ಹಾಕಿದ್ದ ವಿಕೃತ ಮನಸ್ಥಿತಿ ವ್ಯಕ್ತಿ ಅರೆಸ್ಟ್..!

Facebook
Twitter
Telegram
WhatsApp

ಏನೇ ಮಾತಾಡುವಾಗಲೂ ನಾಲಿಗೆಯ ಮೇಲೆ ಎಚ್ಚರವಿರಬೇಕು. ಆಟವೇ ಬೇರೆ, ಧರ್ಮವೇ ಬೇರೆ, ವೈಯಕ್ತಿಕ ಜೀವನವೇ ಬೇರೆ. ಆಟದ ವಿಚಾರಕ್ಕೆ ಆತ ವಿಕೃತ ಮನಸ್ಥಿತಿಯವ ಕೊಹ್ಲಿಯ ಆ ಪುಟ್ಟ ಮಗಳನ್ನ ಎಳೆ ತಂದಿದ್ದ. ಇದೀಗ ಮುಂಬೈ ಪೊಲೀಸರು ತಮ್ಮ ಸಾಮರ್ಥ್ಯ ತೋರಿಸಿ, ಆತನಿಗೆ ಬಿಸಿ ಮುಟ್ಟಿಸಿದ್ದಾರೆ.

ಟೀ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದನ್ನು ಯಾರು ಮರೆತಿರೋಲ್ಲ. ಆಗ ಇಡೀ ಟೀಂ ಇಂಡಿಯಾ ನಾಯಕರು ಶಮಿ ಪರವಾಗಿ ನಿಂತಿದ್ದರು. ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಹಲವರು ಶಮಿ ಪರವಾಗಿ ಮಾತಾಡಿದ್ದರು. ಕೊಹ್ಲಿ ಕೂಡ ಅದನ್ನೇ ಜಪಿಸಿದ್ದರು.

ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡುವ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯುಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು. ಅಷ್ಟೇ ಅಲ್ಲದೆ ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ ಎಂದಿದ್ದರು. ಆಗ ಕೊಹ್ಲಿ ವಿರುದ್ಧ ರೊಚ್ಚಿಗೆದ್ದಿದ್ದ ಕಿಡಿಗೇಡಿಗಳು ಕೊಹ್ಲಿ ನಿಂದಿಸುವ ಬರದಲ್ಲಿ ಆ ಪುಟಾಣಿ 10 ತಿಂಗಳ ಮಗಳ ಬಗ್ಗೆ ಮಾತನಾಡಿದ್ದ. ಅತ್ಯಾಚಾರದ ಬೆದರಿಕೆ ಹಾಕಿದ್ದ.

ಸೋಷಿಯಲ್ ಮೀಡಿಯಾ ಜಾಡು ಹಿಡಿದು ಹೊರಟ ಮುಂಬೈ ಸೈಬರ್ ಸೆಲ್ ಪೊಲೀಸರು, ಇದೀಗ ಆ ಕೀಚಕನನ್ನ ಬಂಧಿಸಿದ್ದಾರೆ. 23 ವರ್ಷದ ರಾಮನಾಗೇಶ್ ಎಂಬಾತನೆ ಈ ರೀತಿ ಕಮೆಂಟ್ ಹಾಕಿದ್ದದ್ದು. ಈತ ಇಂಜಿನಿಯರಿಂಗ್ ವಿದ್ಯಾರ್ಥಿ ಕೂಡ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!