Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ವಿತರಣೆ | ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ನಗರದ ಹನ್ನೆರಡನೆ ವಾರ್ಡ್ ಅಗಸನಕಲ್ಲು ಫಾತಿಮ ಮಸೀದಿ ಸಮೀಪ ಕೇಂದ್ರ ಸರ್ಕಾರದ ಗ್ಯಾರೆಂಟಿ ಕಾರ್ಡ್‍ಗಳನ್ನು ವಿತರಿಸಲಾಯಿತು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್ ಮಹಿಳೆಯರಿಗೆ ಗ್ಯಾರಂಟಿ ಕಾರ್ಡ್‍ಗಳನ್ನು ವಿತರಿಸಿ ಮಾತನಾಡುತ್ತ ಕಾಂಗ್ರೆಸ್‍ಗೆ  ತ್ಯಾಗ ಬಲಿದಾನಗಳ ಇತಿಹಾಸವಿದೆ. ಕೋಮುವಾದಿ ಬಿಜೆಪಿಯಲ್ಲಿ ಯಾರು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿಲ್ಲ. ಇಂದಿರಾಗಾಂಧಿ ರಾಜೀವ್‍ಗಾಂಧಿ ಇವರುಗಳು ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ನೆಹರು ಕುಟುಂಬದ ಕುಡಿ ರಾಹುಲ್‍ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರೆಂಟಿಗಳನ್ನು ಜನತೆಗೆ ನೀಡಿದೆ. ಅದೇ ರೀತಿ ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರೆಂಟಿಗಳನ್ನು ನೀಡುವುದಾಗಿ ಘೋಷಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸರಳ, ಸಜ್ಜನ, ಬಿ.ಎನ್.ಚಂದ್ರಪ್ಪನವರನ್ನು ಗೆಲ್ಲಿಸುವಂತೆ ಮಹಿಳೆಯರಲ್ಲಿ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಹನುಮಲಿ ಷಣ್ಮುಖಪ್ಪ, ಕೆಡಿಪಿ. ಸದಸ್ಯ ಕೆ.ಸಿ.ನಾಗರಾಜ್, ಪರಮೇಶ್ ಇವರುಗಳು ಕಾಂಗ್ರೆಸ್ ಸರ್ಕಾರದ ಸಾಧನೆಗಳ ಕುರಿತು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರೆಂಟಿಗಳನ್ನು ಮನೆ ಮನೆಗೆ ತಿಳಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಶ್ರಮಿಸುವಂತೆ ವಿನಂತಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!