Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

---Advertisement---

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು ನೀಡಿದ್ದಾರೆ. ಸ್ವಾಮೀಜಿಗಳು ಸಲ್ಲಿಕೆ ಮಾಡಿರುವ ಆಸ್ತಿಯ ವಿವರದ ಪ್ರಕಾರ ದಿಂಗಾಲೇಶ್ವರ ಸ್ವಾಮೀಜಿಯ ಬಳಿ ಒಟ್ಟು 9.74 ಕೋಟಿ ರೂಪಾಯಿ ಇದೆ.

 

ದಿಂಗಾಲೇಶ್ವರ ಸ್ವಾಮೀಜಿ ನೀಡಿರುವ ಮಾಹಿತಿ ಪ್ರಕಾರ, 1.22 ಕೋಟಿ ರೂಪಾಯಿ ಚರಾಸ್ಥಿಯಾಗಿದ್ದರೆ, 8.52 ಕೋಟಿ ರೂಪಾಯಿ ಸ್ಥಿರಾಸ್ತಿಯಾಗಿದೆ. 39.68 ಲಕ್ಷ ರೂಪಾಯಿ ಸಾಲ ಇದೆ. ಕೈಯಲ್ಲಿ 1 ಲಕ್ಷದ 25 ಸಾವಿರ ರೂಪಾಯಿ ನಗದು ಇದೆ. ಹಲವು ಬ್ಯಾಂಕ್ ಗಳಲ್ಲಿ ಹನ್ನೊಂದು ಲಕ್ಷ ಹಣ ಇಡಲಾಗಿದೆ. ಜೊತೆಗೆ 4.75 ಲಕ್ಚದ ಶೇರುಗಳನ್ನು ವಿವಿಧ ಸಹಕಾರಿ ಬ್ಯಾಂಕ್ ಗಳಲ್ಲಿ ಬಾಂಡ್ ಇಡಲಾಗಿದೆ. ಸ್ವಾಮೀಜಿ ಮೇಲೆ ಮೂರು ಪ್ರಕರಣಗಳಿವೆ.

 

ಎರಡು ಟೊಯೊಟೊ ಇನೋವಾ ಕಾರು, ಒಂದು ಟ್ರಾಕ್ಟರ್‌ ಹಾಗೂ ಒಂದು ಬಸ್‌ ಅನ್ನು ಹೊಂದಿದ್ದಾರೆ. ಜೊತೆಗೆ 4.35 ಲಕ್ಷ ರೂ. ಮೌಲ್ಯದ 7 ಕೆಜಿ 820 ಗ್ರಾಂ ಬೆಳ್ಳಿ ಹೊಂದಿದ್ದು, 1,17 ಲಕ್ಷ ರೂ. ಮೌಲ್ಯದ 18.9 ಗ್ರಾಂ ಚಿನ್ನವನ್ನು ಹೊಂದಿದ್ದಾರೆ. ಈ ಮೂಲಕ ಒಟ್ಟು 1.22 ಕೋಟಿ ರೂ. ಚರಾಸ್ತಿಯನ್ನು ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿಕೊಂಡಿದ್ದಾರೆ. 23 ಎಕರೆ 17 ಗುಂಟೆ ಕೃಷಿ ಭೂಮಿಯನ್ನು ಹೊಂದಿದ್ದು, 19 ಕಡೆ ಕೃಷಿಯೇತರ ಭೂಮಿ ಹೊಂದಿದ್ದಾರೆ. ಜೊತೆಗೆ ಶಾಲಾ ಕಟ್ಟಡ ಕೂಡ ಇದ್ದು, ಒಟ್ಟು, 8.52 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...