Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮಳೆ ಆರಂಭ: ಶಿವಮೊಗ್ಗದಲ್ಲಿ ಒಬ್ಬ ಸಾವು, ದಾವಣಗೆರೆಯಲ್ಲಿ 25 ಮೇಕೆ ಸಾವು : ಎಲ್ಲೆಲ್ಲಿ ಏನೇನು ಅನಾಹುತ..?

---Advertisement---

ಬೆಂಗಳೂರು: ರಾಜ್ಯಾದ್ಯಂತ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ಎಲ್ಲೆಡೆ ಸಂಪಾಗಿ ಮಳೆ ಬರುತ್ತಿದೆ‌. ಕಳೆದ ಬಾರಿ ಹಿಂಗಾರು-ಮುಂಗಾರು ಕೈಕೊಟ್ಟ ಕಾರಣಕ್ಕೆ ರೈತರು ತಲೆ ಮೇಲೆ ಕೈಹೊತ್ತು ಕೂತಿದ್ದರು. ಇದೀಗ ಮಳೆ ಆರಭವಾಗಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ. ಇನ್ನೊಂದೆ ಸಂಕಟವನ್ನು ತಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತೊರೆಬೈಲು ಗ್ರಾಮದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಭಾರಿ ಮಳೆ-ಗಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಮಳೆಗೆ ಅಕೇಶಿಯಾ ಮರ ಬಿದ್ದು 64 ವರ್ಷದ ಜಯಂತ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇನ್ನು ದಾವಣಗೆರೆಯ ಆನಗೋಡು ಸಮೀಪದ ಈಚಘಟ್ಟದಲ್ಲಿ ಸಿಡಿಲಿಗೆ ಮೇಕೆಗಳು ಸಾವನ್ನಪ್ಪಿವೆ. ಸಿಡಿಲು ಬಡಿದು 16 ಹೆಣ್ಣು‌ಮೇಕೆ, 9 ಗಂಡು‌ ಮೇಕೆ ಸೇರಿ 25 ಮೇಕೆಗಳು ಸಾವನ್ನಪ್ಪಿವೆ. ಈ ಮೂಲಕ ಅಂದಾಜು ಐದು ಲಕ್ಷ ರೂಪಾಯಿ ನಷ್ಟವಾಗಿದೆ. ಈ ಮೇಕೆಗಳು ರೈತ ಮಹಿಳೆ ರೇವಣಿಭಾಯಿ ಪಾಪ್ಯಾನಾಯ್ಕ ಅವರಿಗೆ ಸೇರಿದ ಮೇಕೆಗಳಾಗಿವೆ. ಶಾಸಕ ಕೆ ಎಸ್ ಬಸವಂತಪ್ಪ ಹಾಗೂ ಕಂದಾಯ ಅಧಿಕಾರಿ ಹಾಗೂ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಇನ್ನು ನಿನ್ನೆ ಸುರಿದ ಮಳೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ರಸ್ತೆಯುದ್ಧಕ್ಕೂ ಮಳೆ ನೀರು ತುಂಬಿ ಹರಿದಿದೆ. ವಾಹನ ಸವಾರರು ಪರದಾಟ ನಡೆಸಿದ್ದಾರೆ‌. ಬಳ್ಳಾರಿ, ವಿಜಯನಗರ ಜಿಲ್ಲೆಯೆ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಗದಗ-ಬೆಟಗೇರಿಯಲ್ಲಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಚಾಮರಾಜನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೊದಲ ಮಳೆಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment