Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೋವಿಂದ ಕಾರಜೋಳರವರನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ :  ಬಿ.ಕಾಂತರಾಜ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಏ.19 :  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಕೋಟೆ ರಸ್ತೆಯಲ್ಲಿನ ಕಾಳಮ್ಮ ದೇವಾಲಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಅಮ್ಮನವರಿಗೆ ಪೂಜೆಯನ್ನು ಸಲ್ಲಿಸಿ ಪ್ರಚಾರ ಕಾರ್ಯವನ್ನು ಆರಂಭಿಸಿ ನಂತರ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ನಮ್ಮ ನಾಯಕರಾದ ರಾಷ್ಟ್ರೀಯ ನಾಯಕರಾದ ದೇವೇಗೌಡರವರು ಮತ್ತು ರಾಜ್ಯ ನಾಯಕರಾದ ಕುಮಾರಸ್ವಾಮಿಯವರು ಬಿಜೆಪಿಯ ಜೊತೆಯಲ್ಲಿ ಹೋಂದಾಣಿಕೆಯನ್ನು ಮಾಡಿಕೊಂಡಿದ್ದಾರೆ ಈ ಹಿನ್ನಲೆಯಲ್ಲಿ ನಮ್ಮ ಪಕ್ಷ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಪರವಾಗಿ ಪ್ರಚಾರವನ್ನು ಮಾಡುವುದಲ್ಲದೆ ಅವರ ಗೆಲುವಿಗಾಗಿ ಶ್ರಮ ಹಾಕಲಿದೆ ಎಂದರು.

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 8 ಕ್ಷೇತ್ರಗಳಿದ್ದು ಇದರಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು ಸಹಾ ಬಿಜೆಪಿಯೊಂದಿಗೆ ನಮ್ಮ ಪಕ್ಷ ಸಾಥ್ ನೀಡಲಿದೆ ಎಂಟು ಕ್ಷೇತ್ರದಲ್ಲಿಯೂ ಸಹಾ ಜೆಡಿಎಸ್ ಮುಖಂಡರು, ಹಾಗೂ ಕಾರ್ಯಕರ್ತರು ಬಿಜೆಪಿ  ಗೆಲುವಿಗೆ ತಮ್ಮ ಶ್ರಮವನ್ನು ಹಾಕಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ. ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಸಹಾ ಮತದಾರ ಕೇಂದ್ರದಲ್ಲಿ ಮೋದಿಯವರೇ ಇರಬೇಕು ಎಂದು ಆಸೆಯನ್ನು ಪಟ್ಟಿದ್ದಾರೆ ಕಳೆದ ಎರಡು ಬಾರಿ ಮೋದಿಯವರು ಪ್ರಧಾನ ಮಂತ್ರಿಯಾಗಿ ಹಲವಾರು ಅಭೀವೃದ್ದಿ ಕಾರ್ಯವನ್ನು ಮಾಡಿದ್ದಾರೆ ಮುಂದೆ ಇವರೇ ಪ್ರಧಾನ ಮಂತ್ರಿಯಾದರೆ ದೇಶ ಮತ್ತಷ್ಟು ಅಭೀವೃದ್ದಿ ಹೊಂದಲಿದೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಮತದಾರ ಕೇಂದ್ರದಲ್ಲಿ ಮೋದಿಯನ್ನು ಪ್ರಧಾನ ಮಂತ್ರಿಯಾಗಿ ನೋಡಲು ಬಯಸಿದ್ದರಿಂದ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧ್ಯವಾಗಲಿದೆ ಎಂದು ಕಾಂತರಾಜ್ ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವೆಂಕಟೇಶ್, ತಿಪ್ಪಮ್ಮ ವೆಂಕಟೇಶ್, ಶಶಿಧರ್, ಭಾಸ್ಕರ್, ಹರೀಶ್, ತಾರಕೇಶ್ವರಿ, ಭಾಗ್ಯಮ್ಮ, ವಿರೇಶ್, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಮಂಜುನಾಥ್, ಬಿಜೆಪಿಯ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯ ಲಿಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆಯ 1 ರಿಂದ 5 ನೇ ವಾರ್ಡವರೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಎನ್.ಡಿ.ಎ.ಅಭ್ಯರ್ಥಿ ಗೋವಿಂದ ಕಾರಜೋಳ ರವರ ಪರವಾಗಿ ಮತಯಾಚನೆಯನ್ನು ಮಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!