Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೇಹಾ ಹತ್ಯೆಗೆ ಖಂಡನೆ : ನಾಳೆ ಧಾರವಾಡ ಬಂದ್ ಗೆ ಕರೆ ನೀಡಿದ ಮುಸ್ಲಿಂ ಸಂಘಟನೆ

---Advertisement---

ಧಾರವಾಡ: ನೇಹಾ ಹತ್ಯೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್ ನನ್ನು ಗಲ್ಲಿಗೇರಿಸುವಂತೆ ಒತ್ತಾಯಗಳು ಕೇಳಿ ಬರುತ್ತಿವೆ. ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಒಂದರ್ಧ ದಿನ ಧಾರವಾಡ ಬಂದ್ ಗೆ ಮುಸ್ಲಿಂ ಸಂಘಟನೆಗಳೇ ಕರೆ ನೀಡಿವೆ.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ಮಾತನಾಡಿ, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿರುವುದು ದುರ್ಧೈವ. ನಮ್ಮ‌ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ನಮ್ಮ ಸಮುದಾಯದಿಂದ ನಾಳೆ ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೂ ಅಂಗಡಿಗಳನ್ನು ಬಂದ್ ಮಾಡಿ, ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಎಂಬ ಸ್ಟಿಕ್ಕರ್ ಅಂಟಿಸುತ್ತೇವೆ. ಫಯಾಜ್ ಮಾಡಿರುವುದು ಹೀನ ಕೆಲಸ. ಅವಳು ನಿರಂಜನ ಮಗಳಲ್ಲ, ನಮ್ಮ‌ ಮಗಳು. ಫಯಾಜ್ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

 

ಇದು ವಿಶೇ ಪ್ರಕರಣ ಎಂದು ತಿಳಿದು, 90 ದಿನದಲ್ಲಿ ಪ್ರಕರಣ ಮುಗಿಸಬೇಕು. ಸಮಾಜ ಯಾವುದೇ ಇರಲಿ, ತಪ್ಪಿಗೆ ತಕ್ಕ ಶಿಕ್ಷೆಯಾಗಬೇಕು. ಪೊಲೀಸ್ ಆಯುಕ್ತರಿಗೆ ಈ ಸಂಬಂಧ ಮನವಿ ಮಾಡಿದ್ದೇವೆ. ಸೋಮವಾರ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಲಿದ್ದೇವೆ. ಅಂಜುಮನ್ ಆವರಣದಿಂದ ಮೌನ ಮೆರವಣಿಗೆ ಮಾಡಲಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನ ಒಂದು ಕೊಠಡಿಯನ್ನು ನೇಹಾ ಹೆಸರಲ್ಲಿ ಇಡುತ್ತೇವೆ. ಫಯಾಜ್ ಪರವಾಗಿ ಯಾವ ಮುಸ್ಲಿಂ ವಕೀಲರು ವಜಾಲತ್ತು ವಹಿಸಬಾರದು. ನಾವೂ ವಕೀಲರಿಗೂ ಹೇಳಿದ್ದೇವೆ. ಅವರು ಕೂಡ ಒದಕ್ಕೆ ಒಪ್ಪಿದ್ದಾರೆ. ಪ್ರಕರಣ ಮುಗಿಯುವ ತನಕವೂ ನಮ್ಮ ಸಮುದಾಯ ಅವರ ಜೊತೆಗೆ ಇರಲಿದೆ ಎಂದು ಮುಖಡಂರು ಸಭೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment