Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದೆ : ಪಿ. ರಾಜೀವ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ ಏ. 22 : ಸಿಎಂ ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಸರ್ಕಾರ ಒಂದು ಸಮಾಜದ ಒಲೈಕೆಗಾಗಿ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು  ಕುಡುಚಿ ಮಾಜಿ ಶಾಸಕರು ಹಾಗು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ. ರಾಜೀವ್ ಆರೋಪಿಸಿದರು.

ಚಿತ್ರದುರ್ಗ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ನೇಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಎಂ ಹಾಗೂ ಗೃಹ ಸಚಿವರು ನಿಕೃಷ್ಟವಾದ ಹೇಳಿಕೆ ನೀಡುತ್ತಿದ್ದಾರೆ ಇದು ರಾಜ್ಯದ ದೌರ್ಭಾಗ್ಯ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಚೊಂಬು ಜಾಹೀರಾತು ನೀಡುತ್ತಿದ್ದಾರೆ ಎಂದರು.

 

ರೈತರ ,ದಲಿತರ ಹಾಲು ಉತ್ಪಾದಕರ  ಪ್ರೋತ್ಸಾಹ ಸೇರಿದಂತೆ ಅನೇಕ ಯೋಜನೆಗಳನ್ನು ಕತ್ತರಿಸಿ ಜಬರ ಕೈಗೆ ಚೊಂಬು ಕೊಟ್ಟಿದ್ದು, ಕಾಂಗ್ರೆಸ್ ಎಂದರು. ಬಂಜಾರ ಸಮಾಜವು ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಿಲ್ಲುತ್ತದೆ. ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಎಂದ ಅವರು ಲೋಕಸಭೆ ಚುನಾವಣೆಯಲ್ಲಿ ಒಂದು ಟಿಕೆಟ್ ನೀಡಿಲ್ಲ. ಬಂಜಾರ ಭೋವಿ, ಕೊರಚ ಕೊರಮ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇದು ಜನರಿಗೆ ಅರ್ಥವಾಗಿದೆ. ಇದೆಲ್ಲ ಬೆಳವಣಿಗೆ ಗಮನಿಸಿದ್ದು, ಕರ್ನಾಟಕದಿಂದ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಬೇಕು ಎಂದು ತೀರ್ಮಾನಿಸಿದೆ. 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯವನ್ನು ಶಾಂತಿ ತೋಟವನ್ನಾಗಿ ಮಾಡಲು ಬಿಜೆಪಿ ಸಿದ್ದವಿದ್ದು, ಅದಕ್ಕೆ ಜನರು ಬೆಂಬಲಿ ಗೆಲ್ಲಿಸುತ್ತಾರೆ ಎಂದರು.

ಈ ಸಮಯದಲ್ಲಿ ಹಗರಿಭೋಮ್ಮೇನಹಳ್ಳಿ ಶಾಸಕ ರಾಜೇಶ್ ನೇಮಿಚಂದ್, ಮಾಯಕೊಂಡ ಮಾಜಿ ಶಾಸಕ ಬಸವರಾಜ ನಾಯ್ಕ್,  ಹೂವಿನಹಡಗಲಿ ಶಿರಹಟ್ಟಿ ಶಾಸಕ ಕೃಷ್ಣನಾಯ್ಕ, ಡಾ.ಚಿತ್ರಲಮಾಣಿ, ಶಂಕರ್ ನಾಯ್ಕ್, ಮೃತುಂಜಯ ಬಾದಾಮಿ, ಎಸ್.ಕೆ.ಬೊಳ್ಳುಳ್ಳಿ ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!