Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್ ಸಿಂಹ ಅವರಿಗೇನೆ ಟಿಕೆಟ್ ಸಿಗುತ್ತದೆ ಎಂದು ಭಾವಿಸಿದ್ದರು, ಆ ನಿರೀಕ್ಷೆ ಸುಳ್ಳಾಗಿದೆ. ರಾಜವಂಶಸ್ಥ ಯದುವೀರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಿಂಹ ಬಿಟ್ಟು ರಾಜವಂಶಸ್ಥರಿಗೆ ಟಿಕೆಟ್ ನೀಡಿದ್ದು ಯಾಕೆ ಎಂಬ ಪ್ರಶ್ನೆ ಸುಮಾರು ಜನರಿಗೆ ಇದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ‌. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಯದುವೀರ್ ಅವರನ್ನು ಜನ ನೋಡುವ ರೀತಿಯೇ ಬೇರೆಯದ್ದಾಗಿದೆ. ಅವರನ್ನು ಯಾವುದೋ ಒಂದು ಜಾತಿ ಎಂಬಂತೆ ನೋಡುತ್ತಿಲ್ಲ. ಮಹಾರಾಜ ನಾಲ್ವಡಿ ಒಡೆಯರ್ ಮಾಡಿರುವಂತ ಕೆಲಸಗಳು ಸಿಕ್ಕಾಪಟ್ಟೆ ಇದಾವೆ. ಕೆರೆಕಟ್ಟೆಗಳನ್ನು ಕಟ್ಟಿಸಿ, ಜನತೆಗೆ ಅನುಕೂಲ ಮಾಡಿದ್ದಾರೆ.

ಕನ್ನಂಬಾಡಿ ಕಟ್ಟೆಯನ್ನು ಕಟ್ಟಿದವರು ಅವರೇ. ಇವತ್ತು ಜನ ಅದನ್ನೆಲ್ಲಾ ನೆನೆಸಿಕೊಳ್ಳುತ್ತಾರೆ. ಇಂದು ಜಾತಿ ಅಂತಲ್ಲ, ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡದವರು ಕೂಡ ನೆನೆಸಿಕೊಳ್ಳುತ್ತಾರೆ. ಒಂದು ಕಡೆ ನರೇಂದ್ರ ಮೋದಿಯವರ ಜನಪ್ರಿಯತೆ, ಕೇಂದ್ರ ಸರ್ಕಾರದ 10 ವರ್ಷದ ಸಾಧನೆ. ಮಹಾರಾಜರಿಗೂ ಒಂದು ಹೆಸರಿದೆ. ಈ ಎಲ್ಲಾ ವಿಚಾರಗಳನ್ನು ಇಟ್ಟುಕೊಂಡು ಅವರಿಗೆ ಟಿಕೆಟ್ ನೀಡಲಾಗಿದೆ. ಬಹುಶಃ ನನಗೆ ತಿಳಿದಿರುವಂತೆ ಮಹಾರಾಜರು ಎರಡು ಲಕ್ಷ ಮತದ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮೈಸೂರು ಭಾಗದಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿದ್ದರ ಬಗ್ಗೆ ಮಾಹಿತಿ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...