Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ : ಎಸ್.ಸಂದೀಪ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.24  : ರಂಗಭೂಮಿ ಕಲೆಯಿಂದ ಯಾವ ಕಲೆಗಳೂ ಹೊರತಾಗಿಲ್ಲ. ಸಂಗೀತ, ನಾಟಕ, ನೃತ್ಯ ಮುಂತಾದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ರಂಗಭೂಮಿ ಹಾಸುಹೊಕ್ಕಾಗಿದೆ. ಪ್ರಶಿಕ್ಷಣಾರ್ಥಿಗಳು ರಂಗಭೂಮಿಯ ಪ್ರತಿಯೊಂದೂ ಅಂಶಗಳನ್ನು ಕಲಿಯಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಸಂದೀಪ್ ಅಭಿಪ್ರಾಯಪಟ್ಟರು.

ರಂಗಸೌರಭ ಕಲಾ ಸಂಘ ವತಿಯಿಂದ ನಗರದ ಕೋಟೆ ಮುಂಭಾಗವಿರುವ ಶ್ರೀಮತಿ ಹೇಮಾವತಿ ಕುವೆಂಪು ಶಿಕ್ಷಣ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ದ್ವಿತೀಯ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಏರ್ಪಡಿಸಿದ್ದ ಶಿಕ್ಷಣದಲ್ಲಿ ರಂಗಭೂಮಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಯ ಆರಂಭದ ತರಗತಿಗಳು ಸಾಂಸ್ಕೃತಿಕವಾಗಿ ಪ್ರಾರಂಭಗೊಂಡು ಶಾಲಾ ವಾರ್ಷಿಕೋತ್ಸವದಿಂದ ಅಂತ್ಯಗೊಳ್ಳುತ್ತದೆ. ಮನರಂಜನೀಯವಾಗಿ ಪ್ರಶಿಕ್ಷಣಾರ್ಥಿಗಳು ಬೋಧನಾ ಪ್ರಕ್ರಿಯೆಯಲ್ಲಿ ತೊಡಗಬೇಕು. ಅದಕ್ಕೆ ಬೇಕಾದ ಸವಲತ್ತುಗಳು ರಂಗಭೂಮಿಯಿಂದ ಪಡೆಯಬಹುದು. ವೇಷಭೂಷಣ, ಪ್ರಸಾಧನ, ಪರಿಕರ, ಮುಖವಾಡ, ವರ್ಣಕಲೆ ಮುಂತಾದ ಕಸರತ್ತಿನಿಂದ ಕೂಡಿದ ಪಾಠೋಪಕರಣಗಳು ಮತ್ತು ಪೀಠೋಪಕರಣಗಳನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳಬಹುದು. ಇದರಿಂದ ಪರಿಣಾಮಕಾರಿ ಬೋಧನೆಗೆ ಉತ್ತಮ ಫಲಿತಾಂಶವನ್ನು ಕಂಡುಕೊಳ್ಳಬಹುದು ಎಂದರು.

ಪ್ರಾಚಾರ್ಯ ಡಾ.ಜಿ.ದಾಸಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಶಿಕ್ಷಣಾರ್ಥಿಗಳು ಚಟುವಟಿಕೆಯಿಂದಿರಲು ರಂಗಭೂಮಿ ಸಹಕಾರಿಯಾಗಿದೆ. ಸ್ಪಷ್ಟ ಮಾತುಕತೆ, ದೇಹದ ನಿಲುವು ಪ್ರತಿಯೊಬ್ಬ ಶಿಕ್ಷಕನ ಸಂಪತ್ತಾಗಬೇಕು ಎಂದರು.

ಉಪನ್ಯಾಸಕರಾದ ಡಾ.ಪಿ.ರಾಧಮ್ಮ, ಡಾ.ಎಂ.ಎಸ್.ಲಕ್ಷ್ಮೀದೇವಿ, ಕೆ.ತ್ರಿವೇಣಿ, ಎಂ.ಉಷಾಕಿರಣ, ಟಿ.ತಿಪ್ಪೇರುದ್ರಯ್ಯ ಹಾಗೂ ಬಿ.ಪಾತಲಿಂಗಪ್ಪ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು. ನೀನಾಸಂ ಪದವೀಧರ ಹಾಗೂ ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ನಿರ್ದೇಶನದಲ್ಲಿ ದ್ವಿತೀಯ ಬಿಇಡಿ ಪ್ರಶಿಕ್ಷಣಾರ್ಥಿಗಳು ಮೂಢನಂಬಿಕೆ, ಬಾಲ್ಯವಿವಾಹ, ಮತದಾನ, ವರದಕ್ಷಿಣೆ, ಬಾಲಕಾರ್ಮಿಕ, ಅನಕ್ಷರತೆ, ಭ್ರಷ್ಟಾಚಾರ ಹಾಗೂ ಜಾತಿಪದ್ಧತಿ ನಾಟಕಗಳನ್ನು ಪ್ರದರ್ಶನ ನೀಡಿದರು. ಐಶ್ವರ್ಯ, ಗೀತಾಂಜಲಿ, ಶಿವಮ್ಮ ಪ್ರಾರ್ಥಿಸಿದರು. ಚಿತ್ರ ಸ್ವಾಗತಿಸಿದರು. ಸಂತೋಕುಮಾರಿ ನಿರೂಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!