Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ

---Advertisement---

 

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಯಾದ ಮೇಲೆ ಸಿ ಎಂ ಇಬ್ರಾಹಿಂ ಇದೀಗ ಕಾಣಿಸಿಕೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ. ನಮ್ಮ ಪಾಡಿಗೆ ನಮಗೆ ಇರುವುದಕ್ಕೆ ಬಿಡಿ ಎಂದಿದ್ದಾರೆ.

ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿದ್ದು, ಮಂಗಳಸೂತ್ರ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿಚಾರವಾಗಿ ಮಾತನಾಡಿದ್ದಾರೆ. ಈ ರೀತಿಯ ಹೇಳಿಕೆ ಸರಿಯಲ್ಲ. ೫೦ ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಹೇಳಿಕೆ ನೋಡಿರಲಿಲ್ಲ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ. ನಮ್ಮ ಪಾಡಿಗೆ ಇರೋದಕ್ಕೆ ನಮಗೆ ಬಿಡಿ.

ಏನು ಓಲೈಕೆ ಮಾಡಿದ್ದಾರೆ ಅಂತ ಸ್ವಾಮಿ. ಸಾಚಾರ್ ವರದಿ ಪ್ರಕಾರ ಮುಸ್ಲಿಂ ಸಮುದಾಯ ದಲಿತರಿಗಿಂತ ಕನಿಷ್ಟ ಪರಿಸ್ಥಿತಿ ಯಲ್ಲಿ ಇದ್ದಾರೆ. ಮುಸ್ಲಿಂ ರನ್ನು ಅವರ ಪಾಡಿಗೆ ಬಿಟ್ಟುಬಿಡಿ. ಮಂಗಳಸೂತ್ರ ತೆಗೆದುಕೊಡ್ತಾರೆ ಅಂದ್ರೆ ಇದು ಸರಿಯಲ್ಲ. ಆರ್ಥಿಕ ವಾಗಿ ಕಷ್ಟದಲ್ಲಿ ಇರೋರಿಗೆ ಮೀಸಲಾತಿ ಕೊಡ್ತಾ ಇರೋದು. ಯಾವುದೇ ಜಾತಿಯಲ್ಲಿ ಬಡವರು ಇದ್ರೆ ಕೊಡಬೇಕು. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ. ಮುಸ್ಲಿಂರಿಗೆ ಮೀಸಲಾತಿ ಕೊಟ್ಟಿದ್ದು ಜನತಾದಳ ಸರ್ಕಾರ. ಕಾಂಗ್ರೆಸ್ ಮೀಸಲಾತಿ ಕೊಟ್ಟಿಲ್ಲ. ಇನ್ನೊಂದು ಬಾರಿ ಮನವಿ ಮಾಡ್ತೇನೆ. ಕಾಂಗ್ರೆಸ್, ಬಿಜೆಪಿಯವರು ಮುಸ್ಲಿಂ ರನ್ನು ಸ್ಯಾಂಡ್ ವಿಚ್ ಮಾಡಬೇಡಿ. ನಮ್ಮನ್ನು ಬಿಟ್ಟುಬಿಡಿ ಎಂದು ಸಿ ಎಂ ಇಬ್ರಾಹಿಂ ಮನವಿ ಮಾಡಿದ್ದಾರೆ.ವ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment