Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

---Advertisement---

 

ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ.

ಕ್ಷೇತ್ರ ವ್ಯಾಪ್ತಿಯ ಪಾವಗಡ ತಾಲೂಕಿನಲ್ಲಿನ ನಿಡುಗಲ್ಲು ಮಹಾಸಂಸ್ಥಾನಕ್ಕೆ ನೂರಾರು ವಾಲ್ಮೀಕಿ ಸಮುದಾಯದ ಮುಖಂಡರ ಜೊತೆ ಬಿ.ಎನ್.ಚಂದ್ರಪ್ಪ ಬುಧವಾರ ಭೇಟಿ ನೀಡಿದ್ದ ಸಂದರ್ಭ ಮಠದ ಜಗದ್ಗುರು ಶ್ರೀ ವಾಲ್ಮಿಕಿ ಸಂಜಯ ಕುಮಾರ ಸ್ವಾಮೀಜಿ ಆಶೀರ್ವದಿಸಿ ಮಾತನಾಡಿದರು.

ನಾವು ಸರಳ, ಸಜ್ಜನಿಕೆ, ಜನರ ಜೊತೆ ನಿರಂತರ ಒಡನಾಟ ಹೊಂದಿರುವವರು, ಧಾರ್ಮಿಕ ಕ್ಷೇತ್ರವನ್ನು ಗೌರವಿಸುವಂತಹವರು ರಾಜಕೀಯ ಕ್ಷೇತ್ರದಲ್ಲಿ ಇರಬೇಕೆಂದು ಅಪೇಕ್ಷೆ ಪಡುತ್ತೇವೆ. ಅದರಲ್ಲೂ ಚಂದ್ರಪ್ಪ ಅವರಂತಹ ಸಜ್ಜನರ ಗೆಲುವು ಅಗತ್ಯವಾಗಿದೆ ಎಂದರು.

ವಾಲ್ಮಿಕಿ ಸಮುದಾಯದ ಹಿರಿಯ ನಾಯಕ, ಸಚಿವ ಎನ್. ರಾಜಣ್ಣ ಹಾಗೂ ನೂರಾರು ಮುಖಂಡರು ಚಂದ್ರಪ್ಪ ಅವರನ್ನು ಗೆಲ್ಲಿಸಲು ಶ್ರಮಿಸುತ್ತಿರುವ ವಿಷಯ ನಮ್ಮ ಗಮನಕ್ಕೆ ಇದೆ. ನಾವು ಕೂಡ ನೀವು ಗೆಲ್ಲಬೇಕೆಂದು ಆಶೀರ್ವದಿಸುತ್ತೇವೆ. ಕ್ಷೇತ್ರದ ಪ್ರಜ್ಞಾವಂತ ಮತದಾರರು ಹೃದಯವಂತ, ಸಜ್ಜನಿಕೆ ರಾಜಕಾರಣಿ ಚಂದ್ರಪ್ಪ ಅವರನ್ನು ತಮ್ಮ ಮನೆಯ ಮಗನೆಂದು ಭಾವಿಸಿ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು.

ನಾಡಿಮ ಮಠ, ಮಾನ್ಯಗಳು ಹಾಗೂ ಜನರ ಕುರಿತು ಹೆಚ್ಚು ಗೌರವ ಭಾವನೆ ಹೊಂದಿರುವ ವಿನಯವಂತಿಕೆಯ ಚಂದ್ರಪ್ಪ ಪ್ರಜಾಪ್ರಭುತ್ವ ರಕ್ಷಣೆಗೆ ಬದ್ಧರಾಗಿದ್ದಾರೆ. ಆದ್ದರಿಂದ ಅವರ ಗೆಲ್ಲಬೇಕು. ಈ ನಿಟ್ಟಿನಲ್ಲಿ ಮತದಾರರು ಅವರನ್ನು ಆಶೀರ್ವದಿಸಬೇಕೆಂದು ಕೋರುತ್ತೇವೆ ಎಂದರು.
ವಾಲ್ಮೀಕಿ ಸಮುದಾಯದ ಮುಖಂಡರಾದ ರಾಮಾಂಜನೇಯ, ರಾಜೇಶ್, ರವಿ, ಚಂದ್ರು ಇತರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment