ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಏ.25 : ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಎನ್.ಚಂದ್ರಪ್ಪ, ಮತ್ತು ದಾವಣಗೆರೆ ಕ್ಷೇತ್ರದಲ್ಲಿ ಪ್ರಭಾ ಮಲ್ಲಿಕಾರ್ಜನ್ ಅವರನ್ನು ಗೆಲ್ಲಿಸಲು ಕಾಯಕ ಸಮುದಾಯ ಮುಂದಾಗಬೇಕು ಎಂದು ನಗರ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಮನವಿ ಮಾಡಿದರು.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ನೊಂದ ಸಮಾಜಗಳ ಪರವಾಗಿ ಕಾಂಗ್ರೆಸ್ ಪಕ್ಷ ಬಿಟ್ಟರೆ, ಬೇರೆ ಯಾವುದೇ ಪಕ್ಷಗಳು ಯೋಜನೆಗಳನ್ನು ನೀಡಿಲ್ಲ. ಸವಿತಾ ಸಮಾಜ, ಮಡಿವಾಳ, ಯಾದವ, ಈಡಿಗ, ನೇಕಾರ ವಿಶ್ವಕರ್ಮ, ಗಾಣಿಗ, ಉಪ್ಪಾರ ಹೀಗೆ ಅನೇಕ ಸಮಾಜಗಳಿಗೆ ಸಮಾಜದ ಮಹಾಪುರುಷರ ಜಯಂತಿ, ನಿಗಮ ಸ್ಥಾಪನೆ, ನಿಗಮ ಮಂಡಳಿಗಳಲ್ಲಿ ಸ್ಥಾನ ಸೇರಿದಂತೆ ರಾಜಕೀಯವಾಗಿ ಸ್ಥಾನಮಾನ ನೀಡಿದೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಡಿ.ಕುಮಾರ್ ಎಂದರು.

2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನೊಂದ ಸಮಾಜಗಳಿಗೆ ಸಾಕಷ್ಟು ಯೋಜನೆಗಳನ್ನು ನೀಡಿದ್ದಾರೆ. ಆದ್ದರಿಂದ ಹಿಂದುಳಿದ ಸಮುದಾಯಗಳನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಗ್ಯಾರಂಟಿ ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದೆ. ಶೋಷಿತರ ಪರವಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ ಎಂದರು.
ಇಂದು ಚಿತ್ರದುರ್ಗ ನಗರದ ನಾಲ್ಕನೇ ವಾರ್ಡಿನಲ್ಲಿ ಚಿತ್ರದುರ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾದ ಎನ್ ಡಿ ಕುಮಾರ್ ಹಾಗೂ ಮಾಜಿ ನಗರಸಭೆ ಅಧ್ಯಕ್ಷರಾದ ಸಿಟಿ ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ಎನ್ ಚಂದ್ರಪ್ಪನವರ ಪರ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ಮೈಲಾರಪ್ಪ, ಲಿಂಗರಾಜು, ಗಿರೀಶ,ಸತೀಶ್ ಹಾಗೂ ಇನ್ನೂ ಅನೇಕ ಮಂದಿ ಹಾಜರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್