Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅದ್ದೂರಿಯಾಗಿ ಜರುಗಿದ ಬೆಳಗೆರೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಚಳ್ಳಕೆರೆ, ಏಪ್ರಿಲ್. 25 : ತಾಲೂಕಿನ ಬೆಳಗೆರೆ ಹಾಗೂ ನಾರಾಯಣಪುರದ ಮಧ್ಯ ಕೆರೆ  ಏರಿ ಬುಡದಲ್ಲಿ ನೆಲೆಸಿರುವ ಭಕ್ತರನ್ನು ಕಾಪಾಡುತ್ತಿರುವ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಜಾತ್ರೆ ಅದ್ದೂರಿಯಾಗಿ ಜರಗಿತು.

ಸುಮಾರು ಮೂರು ದಿನಗಳಿಂದ ಜಾತ್ರೆಯನ್ನು ವಿಶೇಷವಾಗಿ ಆಚರಣೆ ಮಾಡಲಾಯಿತು.

ಪುರೋಹಿತ ಯಾದಾಟು ವಂಶಸ್ಥರಾದ ಶ್ರೀ ಮುರಳಿದರ ಶಾಸ್ತ್ರಿ ಅವರು ಪೌರಹಿತ್ಯದಲ್ಲಿ ಜಾತ್ರೆ ನಡದಿದ್ದು  ಬೆಳಗೆರೆ ಹಾಗೂ ನಾರಾಯಣಪುರ ಗ್ರಾಮದಲ್ಲಿ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಂತರ ಪ್ರಧಾನ ದೇಗುಲದಲ್ಲಿ ಹೋಮ ಹವನಾದಿಗಳು ನಡೆದವು. ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಪ್ರಾಣಗ್ರಹಣ ಮಹೋತ್ಸವ ನಡೆಯಿತು. ನಂತರ ಗ್ರಾಮಸ್ಥರು ಇಟ್ಟಿನ ಆರುತಿನ ಬೆಳಗಿದರು.  ನಂತರ ಅಲಂಕೃತ ಗೊಂಡ ಟ್ರ್ಯಾಕ್ಟರ್ ನಲ್ಲಿ ಉತ್ಸವ ಲಕ್ಷ್ಮಿ ರಂಗನಾಥ ಸ್ವಾಮಿ ಮೂರ್ತಿಯನ್ನು ಇಟ್ಟು ಉತ್ಸವ ಕಾರ್ಯಕ್ರಮ ನೆರವೇರಿಸಿದರು. ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಉತ್ಸವದಲ್ಲಿ ಕಲಾ ತಂಡಗಳು ಜಾತ್ರಗೆ  ಮೆರಗು ತಂದವು. ನಂತರ ಸಂಜೆ ಆರು ಗಂಟೆಗೆ ಅಲಂಕೃತ ಗೊಂಡ ರಥದಲ್ಲಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯನ್ನು ಕೂರಿಸಿ ಪಾದಗಟ್ಟೆಯವರಿಗೂ ಭಕ್ತರು ತೇರನ ಎಳೆದರು.

ತೇರನ್ನು ಎಳೆಯುವಾಗ ಭಕ್ತರು ಬಾಳೆಹಣ್ಣು, ಸೂರ ಮೆಣಸು ಸೂರುಬೆಲ್ಲ. ಹಾಗೂ ರಥದ ಗಾಲಿಗಳಿಗೆ  ತೆಂಗಿನಕಾಯಿ ಹಾಕುವುದರ ಮೂಲಕ ತಮ್ಮ ಸಂಕಲ್ಪ ಈಡೇರಲಿ ಎಂದು ಬೇಡಿಕೊಂಡರು. ನಂತರ ಮೂಲಸ್ಥಾನಕ್ಕೆ ಬ್ರಹ್ಮರಥವನ್ನು ಎಳೆದು ತಂದು ನಿಲ್ಲಿಸಿ ಮಾತುಗಾರಿಕೆ ಹಾಗೂ ಪಾರಿವಾಟ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಜಾತ್ರೆಗೆ ಆಂಧ್ರಪ್ರದೇಶ ತೆಲಂಗಾಣ ತುಮಕೂರು ದಾವಣಗೆರೆ ಬಳ್ಳಾರಿ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿದ್ದರು.

ಬೆಳಗೆರೆ ರಂಗನಾಥ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ದೇವಸ್ಥಾನ ಅರ್ಚಕರು ಹಾಗೂ ಅಣ್ಣತಮ್ಮಂದಿರರು ಹಾಗೂ ಬೆಳಗೆರೆ ನಾರಾಯಣಪುರ ಗ್ರಾಮದ ಮುಖಂಡರು ಗ್ರಾಮಸ್ಥರು ಈ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಸಾವಿರಾರು ಭಕ್ತರು ಜಾತ್ರೆಯಲ್ಲಿ ಭಾಗಿಯಾಗಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಆಶೀರ್ವಾದ ಪಡೆದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!