ಟಿ20 ವಿಶ್ವಕಪ್ ನಿಂದ ಹಾರ್ದಿಕ್ ಪಾಂಡ್ಯ, ಶುಭ್ಮನ್ ಗಿಲ್ ಔಟ್..!

ಟಿ20 ವಿಶ್ವಕಪ್ ಸಂಬಂಧ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ಸದ್ಯ ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದು, ಇದು ಮುಗಿದ ಬಳಿಕ ಟಿ20 ವಿಶ್ವಕಪ್ ನಡೆಯಲಿದೆ. ವಿಶ್ವಕಪ್ ಟೂರ್ನಿಮೆಂಟ್ ಗೆ ಈಗಾಗಲೇ ಆಟಗಾರರನ್ನು ಆಯ್ಕೆ ಮಾಡಲಾಗುತ್ತಿದೆ. ಇದರ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ಶುಭ್ಮನ್ ಗಿಲ್ ಹೊರ ಬಿದ್ದಿರುವ ವಿಚಾರ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಶಾಕಿಂಗ್ ಎನಿಸಿದೆ.

ಈ ಟೂರ್ನಿಗೆ ಸೂಕ್ತ ಆಟಗಾರರನ್ನು ಗುರುತಿಸಲು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಸಾಕಷ್ಟು ಹೋಂ ವರ್ಕ್ ನಡೆಸುತ್ತಿದೆ. ಈಗಾಗಲೇ ಹಲವು ಆಟಗಾರರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶ‌ನ ನೀಡುತ್ತಿರುವವರಿಗೆ ವಿಶ್ವಕಪ್ ನಲ್ಲಿ ಸ್ಥಾನ ನೀಡಿ ಎಂದು ದಿಗ್ಗ ಕ್ರಿಕೆಟರ್ ಯುವರಾಜ್ ಸಿಂಗ್ ಭಾರತೀಯ ಸಮಿತಿಗೆ ಸಲಹೆ ನೀಡಿದ್ದಾರೆ. ಹೀಗಾಗಿಯೇ ಐಪಿಎಲ್ ಮ್ಯಾಚ್ ಅನ್ನು ಬಹಳ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇ ವೇಳೆ ಯುವರಾಜ್ ಸಿಂಗ್ ಮತ್ತಷ್ಟು ಸಲಹೆಗಳನ್ನು ನೀಡಿದ್ದು, ರಿಂಕು ಸಿಂಗ್ ಕೂಡ ಭಾರತ ತಂಡದ ಭಾಗವಾಗಲಿ. ಭಾರತ ತಂಡಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಶುಭ್ಮನ್ ಗಿಲ್ ಅವರನ್ನು ಆಯ್ಕೆ ಮಾಡುವಾಗ ಯೋಚಿಸಿ ಎಂದಿದ್ದಾರೆ. ಹೀಗಾಗಿ ಆ ಇಬ್ಬರಿಗೆ ಟಿ20 ವಿಶ್ವಕಪ್ ನಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ತೀರಾ ಕಡಿಮೆ ಇದೆ ಎನ್ನಲಾಗಿದೆ. ಇದು ಅಭಿಮಾನಿಗಳಿಗೆ ಶಾಕಿಂಗ್ ಕೂಡ ಎನಿಸಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks