ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ ಮಳೆಯ ಸುಳಿವೇ ಇಲ್ಲದಿರುವುದು ಜನ ಸುಸ್ತಾಗಿ ಹೋಗುತ್ತಿದ್ದಾರೆ. ಆದರೆ ಹವಮಾನ ಇಲಾಖೆ ಕೊಂಚ ರಿಲ್ಯಾಕ್ಸ್ ಆಗುವಂತೆ ಸುದ್ದಿಯೊಂದನ್ನು ನೀಡಿದೆ.
ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ದಿನೇ ದಿನೇ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ತಪ್ಪಿಸಿಕೊಳ್ಳುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಶೆಕೆ ತಡೆಯಲಾಗುತ್ತಿಲ್ಲ. ಸದ್ಯ ಬೆಂಗಳೂರಿಗರಿಗೂ ಮೇ 4ರಿಂದ ವರುಣ ಕರುಣೆ ತೋರುವ ಸಾಧ್ಯತೆ ಇದೆ. ಹವಮಾನ ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಮೇ 4ರಿಂದ ಮೇ 15ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್