ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ ಮಳೆಯ ಸುಳಿವೇ ಇಲ್ಲದಿರುವುದು ಜನ ಸುಸ್ತಾಗಿ ಹೋಗುತ್ತಿದ್ದಾರೆ. ಆದರೆ ಹವಮಾನ ಇಲಾಖೆ ಕೊಂಚ ರಿಲ್ಯಾಕ್ಸ್ ಆಗುವಂತೆ ಸುದ್ದಿಯೊಂದನ್ನು ನೀಡಿದೆ.
ಇಂದಿನಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಮೈಸೂರು, ಹಾಸನ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ದಿನೇ ದಿನೇ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಹೀಗಾಗಿ ಬಿಸಿಲಿನಿಂದ ತಪ್ಪಿಸಿಕೊಳ್ಳುವುದಕ್ಕೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಆದರೂ ಶೆಕೆ ತಡೆಯಲಾಗುತ್ತಿಲ್ಲ. ಸದ್ಯ ಬೆಂಗಳೂರಿಗರಿಗೂ ಮೇ 4ರಿಂದ ವರುಣ ಕರುಣೆ ತೋರುವ ಸಾಧ್ಯತೆ ಇದೆ. ಹವಮಾನ ಇಲಾಖೆ ಈ ಸಂಬಂಧ ಮಾಹಿತಿ ನೀಡಿದೆ. ಮೇ 4ರಿಂದ ಮೇ 15ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














