Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

---Advertisement---

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಕೊಪ್ಪಳ ಲೋಕಸಭಾ ಕ್ಷೇತ್ರದ ಪ್ರಚಾರ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಗುಂಡಿಟ್ಟು ನಾವೇ ಕೊಲ್ಲುತ್ತೇವೆ ಎಂದಿದ್ದಾರೆ. ಇತ್ತೀಚೆಗೆ ಪಾಕಿಸ್ತಾನ ಘೋಷಣೆ ಕೂಗುವರು ಹೆಚ್ಚಾಗಿದ್ದಾರೆ. ಬಿಜೆಪಿಯವರೇ ಹೊಸದಾಗಿ ಒಂದು ಶುರು ಮಾಡಿದ್ದಾರೆ. ಅವರೇ ನಾಲ್ಕು ಜನರನ್ನು ಕಳಿಸಿ ಪಾಕಿಸ್ತಾನ ಘೋಷಣೆ ಕೂಗಿಸುತ್ತಾರೆ. ಬಿಜೆಪಿಯವರೇ ಕೆಲವು ಕಡೆ ಕಳಿಸಿ ಘೋಷಣೆ ಕೂಗಿಸ್ತಾರೆ.

ಹೀಗೆ ಘೋಷಣೆ ಕೂಗುವವರನ್ನು ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು. ಕೋರ್ಟ್ನಿಂದಲೇ ಹೀಗೆ ಗುಂಡಿಟ್ಟು ಕೊಲ್ಲಲು ಸರ್ಕಾರ ಆದೇಶ ಮಾಡಿಸಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು. ಆಗ ಬಿಜೆಪಿಯವರಿಗೆ ಹೇಳಲು ಏನೂ ಇರುವುದಿಲ್ಲ. ಬಿಜೆಪಿಯವರಿಗೆ ಹಿಂದೂ ಬೇಡ ಮುಸ್ಲಿಮರು ಬೇಡ ಅವರಿಗೆ ಬೇಕಾಗಿರುವುದು ಕೇವಲ ಅಧಿಕಾರ ಎಂದು ಬಿಜೆಪಿಗರ ಮೇಲೆ ಕಿಡಿಕಾರಿದ್ದಾರೆ.

ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ನಾಸೀರ್ ಹುಸೇನ್ ಬೆಂಬಲುಗರು ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೀಗೆ ಸಾಕಷ್ಟು ಬಾರಿ ರಾಜ್ಯದಲ್ಲಿ ಪಾಕಿಸ್ತಾನ ಪರದ ಘೋಷಣೆ ಕೂಗಿದ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಜಮೀರ್ ಅಹ್ಮದ್ ಅವರೇ ಅಂತವರನ್ನು ಕೊಲ್ಲಿ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment