Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

---Advertisement---

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ ಹೆಚ್ಚಿಸಿದೆ‌.

ಇಂದು ಗುಜರಾತ್ ಟೈಮ್ಸ್ ಎದುರು ಆರ್ಸಿಬಿ ಮ್ಯಾಚ್ ನಡೆಯಬೇಕಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್ಸಿಬಿ ತಂಡ ಇತ್ತಿಚೆಗೆ ಎರಡು ಮ್ಯಾಚ್ ಗಳಲ್ಲಿ ಭರ್ಜರಿಯಾಗಿ ಗೆಲುವು ಕಂಡಿತ್ತು. ಹತ್ತು ಪಂದ್ಯಗಳಲ್ಲಿ ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಹತ್ತನೇ ಸ್ಥಾನ ಪಡೆದಿತ್ತು. ಸದ್ಯ ನೆಟ್ ರನ್ ರೇಟ್ ಕೂಡ ಸುಧಾರಿಸಿದೆ. ಆದರೆ ಈಗಿರುವಾಗಲೇ ಪಂದ್ಯಗಳು ಕ್ಯಾನ್ಸಲ್ ಆಗುವ ಸಾಧ್ಯತೆ ಆರ್ಸಿಬಿ ಫ್ಯಾನ್ಸ್ ಗೆ ಬೇಸರ ತರಿಸಿದೆ.

ಈಗಂತೂ ವಿರಾಟ್, ದಿನೇಶ್ ಕಾರ್ತಿಕ್, ಫಾಫ್, ರಜತ್ ಪಾಟಿದಾರ್, ವಿಲ್ ಜಾಕ್ಸ್ ಎಲ್ಲರು ತಮ್ಮ ತಮ್ಮ ಫಾರ್ಮ್ ಗೆ ಮರಳಿದ್ದಾರೆ‌ ಈಗ ಗುಜರಾತ್ ಟೈಟನ್ಸ್ ನ ಕಡೆಗಣಿಸುವಂತೆ ಇಲ್ಲ. ಆದರೆ ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ರಾತ್ರಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ಕೊಟ್ಟಿದೆ. ವಾತಾವರಣ ಕೂಡ ಕೊಂಚ ಕೂಲಾಗಿದೆ. ಹೀಗಾಗಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆರಂಭದಲ್ಲಿ ಸತತ ಸೋಲು ಕಾಣುತ್ತಿದ್ದರು, ಆರ್ಸಿಬಿ ಮುಂದೆ ಗೆದ್ದೆ ಗೆಲ್ಲುತ್ತದೆ ಎಂಬ ದಿಡ್ಡ ಕನಸು ಅಭಿಮಾನಿಗಳದ್ದು. ಅದರಲ್ಲೂ ಇತ್ತಿಚೆಗೆ ಎರಡು ಮ್ಯಾಚ್ ಗೆದ್ದ ಮೇಲಂತು ಕಪ್ ಗೆದ್ದಷ್ಟೇ ಖುಷಿಯಾಗಿದ್ದಾರೆ. ಹೀಗಿರುವಾಗ ಮಳೆಯಿಂದಾಗಿ‌ಪಂದ್ಯ ರದ್ದಾದರೆ ಅಭಿಮಾನಿಗಳ ಎದೆ ಹೊಡದೆ ಹೋಗುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...