Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

---Advertisement---

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರು ನೀಡಿದ ಸಂತ್ರಸ್ತೆ 6ನೇ ತರಗತಿಗೆ ವಿದ್ಯಾಬ್ಯಾಸ ಮಾಡಲು ಹಿರಿಯೂರು ತಾಲೂಕಿನಲ್ಲಿರುವ ದೊಡ್ಡಮ್ಮ ಮನೆಗೆ ಬಂದಿರುತ್ತಾಳೆ. ಈ ವೇಳೆ ವಿದ್ಯಾರ್ಥಿನಿಯ ಸಹಪಾಠಿಯ ಅಣ್ಣನ ಪರಿಚಯವಾಗಿರುತ್ತದೆ. ಸಹಪಾಠಿಯ ಅಣ್ಣನು ವಿದ್ಯಾರ್ಥಿನಿಗೆ ಚಾಕಲೇಟ್, ಬಿಸ್ಕತ್ತು ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಯ ಖಾಸಗಿ ಅಂಗಾಂಗಗಳನ್ನು ಮುಟ್ಟುತ್ತಿದ್ದನಂತೆ. ಜೊತೆಗೆ ಎಸ್ಎಸ್ಎಲ್ಸಿ ಓದುವಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಬಂದು, ಬೇಡವೆಂದರೂ ಪಿಲಾಲಿ ಗ್ರಾಮದ ಆರೋಪಿ ಬಲವಂತವಾಗಿ ಹಲವು ಬಾರಿ ಸಂಭೋಗ ಮಾಡಿದ್ದನಂತೆ. ಅಲ್ಲದೆ ಆರೋಪಿ ವಿದ್ಯಾರ್ಥಿನಿ ಮೊಬೈಲ್ ಗೆ ಪ್ರತಿನಿತ್ಯ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನಂತೆ.

ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆಯೊಡ್ಡಿದ್ದನಂತೆ. ಆರೋಪಿ ಎಸಗಿರುವ ದೌರ್ಜನ್ಯದ ಬಗ್ಗೆ ತಾಯಿಗೆ ವಿದ್ಯಾರ್ಥಿನಿ ತಿಳಿಸಿದ್ದಾಳೆ.
ವಿದ್ಯಾರ್ಥಿನಿಯ ಪೋಷಕರು ಮತ್ತು ಸಂಬಂಧಿಕರು ಆರೋಪಿ ಮನೆ ಬಳಿ ನ್ಯಾಯ ಕೇಳಲು ಹೋಗಿದ್ದರಂತೆ. ಆಗ ಆರೋಪಿಯ ತಂದೆ ತಾಯಿ ಅವರು ಆವಾಚ್ಯ ಶಬ್ದಗಳಿಂದ ನಿಂದಿಸಿ ಬೈದರಂತೆ. ಅಲ್ಲದೆ ಆರೋಪಿ ತಂದೆ ಹೇ ಸೂ….. ಎಂದು ನೀನು ನನ್ನ ಮಗನ ಜೊತೆ ಮಲಗಿರುವುದು ಸತ್ಯ, ಅದಕ್ಕೆ ಏನು ಕೊಡಬೇಕು ಹೇಳು ಕೊಡುತ್ತೆವೆ ಇಲ್ಲಿಂದ ಹೊರಟು ಹೋಗಿ ಎಂದು ನಿಮ್ಮನ್ನಾ ಸುಮ್ನೆ ಬಿಡುವುದಿಲ್ಲ ಎಂದು ಆರೋಪಿಯ ಪೋಷಕರು ವಿದ್ಯಾರ್ಥಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ.

ಈ ವಿಚಾರವಾಗಿ ಗ್ರಾಮಸ್ಥರು ಮಾತನಾಡೋಣ ಎಂದು ಹೇಳಿದರಂತೆ. ಆದರೆ ಇದುವರೆಗೂ ಯಾವುದೇ ಮಾತುಕತೆಗೆ ಬಾರದ ಹಿನ್ನೆಲೆಯಲ್ಲಿ ತಡವಾಗಿ ಬಂದು ಹಿರಿಯೂರು ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment