Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

---Advertisement---

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ ಕೆಲವೆಡೆ ಬಾರೀ ಮಳೆಯಾಗಲಿದೆ. ಕೊಡಗು, ಮೈಸೂರಿ, ಮಂಡ್ಯ ಭಾಗದ ಹಲವೆಡೆ ಮಳೆಯಾಗಲಿದೆ ಎಂಬ ಮಾಹಿತಿ ತಿಳಿಸಿದೆ‌.

ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ. ಮಳೆಯ ಸೂಚನೆಯೂ ಸಿಕ್ಕಿದ್ದು, ಬೇಗ ಬೇಗ ಮತಹಾಕಿದರೆ ಉತ್ತಮವಾಗಲಿದೆ.

ಮಳೆಯಿಲ್ಲದೆ ಕರಾವಳಿ ಭಾಗದಲ್ಲೂ ತಾಪಾಮಾನ ಹೆಚ್ಚಾಗಿತ್ತು. ಆದರೆ ಇಂದು ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಹಗುರವಾದ ಮಳೆಯಾಗಲಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಸೇರಿದಂತೆ ಹಲವೆಡೆ ಮಳೆ ಬಿದ್ದರು ಹೀಟ್ ವೇವ್ ಮುಂದುವರೆದಿದೆ. ಬಿಸಿಗಾಳಿಯಿಂದ ಜನ ಇನ್ನಷ್ಟು ಕಂಗಕಾಗಿದ್ದಾರೆ. ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಹಾಗೂ ಎಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment