Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುರುವನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರೈತರಿಗೆ ಬೆಳೆವಿಮೆ ಹಣವನ್ನು ಖಾತೆಗೆ ಜಮಾಮಾಡುವಂತೆ ಒತ್ತಾಯಿಸಿ ರೈತರ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,ಮೇ.08 : ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬೆಳೆ ವಿಮೆಯ ಕಟ್ಟಿದ ರೈತರಿಗೆ ವಿಮಾ ಕಂಪನಿಯವರು ಹಣವನ್ನು ನಿಗದಿಪಡಿಸಿದ್ದಾರೆ. ಆದರೆ ರೈತರ ಖಾತೆಗೆ ನಯಾ ಪೈಸೆ ಹಾಕದೆ ಇರುವ ಕಾರಣ ಅಪರ ಜಿಲ್ಲಾಧಿಕಾರಿರವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ. ವಾಸುದೇವ ಮೇಟಿಬಣದಿಂದ ಮನವಿಯನ್ನು ಸಲ್ಲಿಸಲಾಯಿತು.

2023 – 24ನೇ ಸಾಲಿನ ಮುಂಗಾರು ಬೆಳೆಯಾದ ಮೆಕ್ಕೆಜೋಳಕ್ಕೆ ಈ ಭಾಗದ ರೈತರು ಬೆಳೆ ವಿಮೆಯನ್ನು ಪಾವತಿಸಿದ್ದರು, ಸಕಾಲಕ್ಕೆ ಮಳೆ ಬಾರದೆ ಬೆಳೆ ಹಾಳಾಯಿತು, ಈ ಹಿನ್ನಲೆಯಲ್ಲಿ ವಿಮಾ ಕಂಪನಿಯವರು ಬೆಳೆ ವಿಮೆಯ ಹಣವನ್ನು ನಿಗಧಿ ಮಾಡಿದ್ದಾರೆ ಆದರೆ ನಮ್ಮ ಖಾತೆಗಳಿಗೆ ಹಣವನ್ನು ಹಾಕಿಲ್ಲ ಬಡವರಾದ ನಮಗೆ ವಿಮಾ ಕಂಪನಿಯಿಂದ ಬೆಳೆ ವಿಮೆಯ ಹಣವನ್ನು ಕೂಡಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಲಾಯಿತು.

ನಮ್ಮ ಮನವಿಯನ್ನು ಸ್ವೀಕಾರ ಮಾಡಿದ ಅಪರ ಜಿಲ್ಲಾಧಿಕಾರಿಯವರಾದ ಕುಮಾರಸ್ವಾಮಿಯವರು  ಶೀಘ್ರದಲ್ಲಿಯೇ ಹಣವನ್ನು ಪಾವತಿಸಲು ಸಂಬಂಧ ಪಟ್ಟ ಇಲಾಖೆಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಶೀಘ್ರವೇ ರೈತರ ಖಾತೆಗೆ ಹಣವನ್ನು ನೀಡಲು ಸೂಚಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ್, ತಿಪ್ಪಾರೆಡ್ಡಿ, ನಾಗರಾಜ್, ಪೂಜಾರಪ್ಪ, ದೀಕ್ಷಿತ, ಶ್ರೀನಿವಾಸ್, ಜಯ್ಯಣ್ಣ, ವಾಸುದೇವರೆಡ್ಡಿ ಹಾಜರಿದ್ದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment