Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತೆ ನ್ಯಾಯಾಂಗ ಬಂಧನಕ್ಕೆ..!

---Advertisement---

ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಮತ್ತೆ ನ್ಯಾಯಾಂಗ ಬಂಧನವಾಗಿದೆ. ರೇವಣ್ಣ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಲಯ ಮಹತ್ವದ ಆದೇಶವನ್ನು ಹೊರಡಿಸಿದೆ.

ಕಿಡ್ನ್ಯಾಪ್ ಕೇಸ್ ನಲ್ಲಿ ಎಸ್ಐಟಿ ಪೊಲೀಸರ ಅತಿಥಿಯಾಗಿರುವ ರೇವಣ್ಣ ಅವರಿಗೆ ಇಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ರವೀಂದ್ರ ಕುಮಾರ್ ಬಿ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ನಡೆದಿದೆ. ಇದನ್ನು ಆಲಿಸಿದೆ. ನ್ಯಾಯಮೂರ್ತಿಗಳು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ರೇವಣ್ಣ ಅವರಿಗೆ ನಿನ್ನೆಯಿಂದಾನು ಆರೋಗ್ಯ ಸರಿ ಇಲ್ಲ. ಹಿಟ್ಟೆ ಉರಿ, ಎದೆ ನೋವಿನಿಂದ ಬಳಲುತ್ತಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಇಂದು ಜಾಮೀನು ಸಿಗುತ್ತೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಇಂದು ಕೂಡ ಜಾಮೀನು ಸಿಕ್ಕಿಲ್ಲ. ವಿಚಾರಣೆಗಾಗಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ರೇವಣ್ಣ ಅವರನ್ನು ಬಂಧಿಸಿ ನಾಲ್ಕೈದು ದಿನಗಳಾಗಿವೆ. ಆದರೆ ಕಿಡ್ನ್ಯಾಪ್ ಕೇಸ್ ಆಗಲಿ, ಮಗನ ಅಶ್ಲೀಲ ವಿಡಿಯೋಗಳ ಬಗ್ಗೆಯಾಗಲಿ ಯಾವುದೇ ರೀತಿ ಮಾತನಾಡಿಲ್ಲ ಎನ್ನಲಾಗುತ್ತಿದೆ. ಹೀಗಾಗಿ ಇನ್ನಷ್ಟು ತನಿಖೆಗಾಗಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಪೊಲೀಸರು ಸಾಕಷ್ಟು ಬಾರಿ ನೋಟೀಸ್ ನೀಡಿದರು ತನಿಖೆಗೆ ಹಾಜರಾಗಿಲ್ಲ. ವಿದೇಶದಿಂದ ಇನ್ನು ಭಾರತಕ್ಕೆ ಬಂದಿಲ್ಲ. ಇಂದು ಅಥವಾ ನಾಳೆ ಬರಬಹುದು ಎನ್ನಲಾಗಿದ್ದು, ಬಂದ ಕೂಡಲೇ ಎಸ್ಐಟಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...