Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

---Advertisement---

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜ ವತಿಯಿಂದ ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಅಖಿಲ ಭಾರತ ವಿಶ್ವಕರ್ಮ ಪರಿಷತ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಪ್ರಸ್ತುತ ಸಾರ್ವತ್ರಿಕ ಮತ್ತು ಸ್ಪರ್ಧಾ ಪರೀಕ್ಷೆಗಳಲ್ಲಿ ಹೆಣ್ಣು ಮಕ್ಕಳ ಸಾಧನೆ ಕಾಣುತ್ತಿದ್ದೇವೆ. ಬಡತನದ ಪರಿಸ್ಥಿತಿ ಮತ್ತು ಕೂಲಿ ಕಾರ್ಮಿಕ ಕುಟುಂಬಗಳ ಮಕ್ಕಳ ಸಾಧನೆ ದಾಖಲೆ ಆಗುತ್ತಿದೆ. ಇಂತಹ ನೆಲೆಯಲ್ಲಿ ಸಾಮಾಜಿಕ ಸೇವಾ ಕಾರ್ಯದಂತೆ ಪತ್ರಿಕಾ ವರದಿಗಾರಿಕೆ ಸೇವೆಯಲ್ಲಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ 526 ಅಂಕ ಪಡೆದುಕೊಂಡು ಉತ್ತಮ ಸ್ಥಾನದಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಆಗಿದ್ದಾರೆ. ಶಿಕ್ಷಣ ಕಲಿಕೆಯಲ್ಲಿ ಉತ್ತಮ ಸಾಧಕರಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಜೆ. ತಿಪ್ಪೇಸ್ವಾಮಿ, ನಿಕಟಪೂರ್ವ ಅಧ್ಯಕ್ಷ ಸಿ.ಪಿ. ರಂಗನಾಥ, ಉಪಾಧ್ಯಕ್ಷ ಬೊಮ್ಮಣ್ಣ, ವಿಶ್ವಕರ್ಮ ನಿಗಮದ ಸದಸ್ಯ ಕೆ.ಚಂದ್ರಶೇಖರಚಾರ್, ಬಳ್ಳಾರಿ ಶ್ರೀಕಾಂತಚಾರ್, ನೇತಾಜಿ ಸ್ನೇಹಬಳಗ ಅಧ್ಯಕ್ಷ ಪ್ರಸನ್ನಕುಮಾರ್, ಬಿ. ಫರೀದ್‍ಖಾನ್, ಎಂ. ಶ್ರೀನಿವಾಸ್‍ಬಾಬು, ಕೊರ್ಲಕುಂಟೆ ತಿಪ್ಪೇಸ್ವಾಮಿ, ಎನ್. ಸಾವಿತ್ರಮ್ಮ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...