Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

---Advertisement---

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ.

ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಣ್ಣಯ್ಯ ಲೇ ಔಟ್ ನಲ್ಲಿ ವಾಸವಾಗಿದ್ದ ಚೈತ್ರಾ, ಹೈಕೋರ್ಟ್ ನಲ್ಲಿ ಅಡ್ವೋಕೇಟ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಪತಿ ಕೂಡ ಐಎಎಸ್ ಆಫೀಸರ್ ಆಗಿದ್ದವರು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಕಾರ್ಯ ನರ್ವಹಿಸುತ್ತಿದ್ದಾರೆ ಚೈತ್ರಾ ಪತಿ.

ಚೈತ್ರಾ ಸಾವಿಗೆ ಕಾರಣ ಏನೆಂಬುದು ಇನ್ನು ತಿಳಿದಿಲ್ಲ. ಚೈತ್ರಾ ವಕೀಲೆ ಮಾತ್ರ ಅಲ್ಲ, ಮಾಡೆಲ್ ಕೂಡ ಆಗಿದ್ದರು. ಆದರೆ ಇಂದು ಈ ರೀತಿ ಮೃತದೇಹ ಪತ್ತೆಯಾಗಿದೆ. ಮನೆಯವರ ಮಾಹಿತಿ ಪ್ರಕಾರ ದಂಪತಿಯ ನಡುವೆ ವೈಮನಸ್ಸಿತ್ತು ಎನ್ನಲಾಗಿದೆ. ಆದರೆ ಚೈತ್ರಾ ಸಾವಿಗೆ ಇದೇ ಕಾರಣ ಎಂಬುದು ಇನ್ನು ತಿಳಿದಿಲ್ಲ. ಸದ್ಯಕ್ಕೆ ಸಂಜಯನಗರ ಪೊಲೀಸರು ಸ್ಥಳಕ್ಕೆ ಬಂದು, ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment